‘ಈ ಕಾಯಿಲೆಯು ಒಬ್ಬ ವ್ಯಕ್ತಿಗೆ ಸಿಮೀತವಾಗಿರದೆ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಈ ಕಾಯಿಲೆಗೆ ಒಳಗಾದವರನ್ನು ಯಾವ ರೀತಿ ನಿಭಾಯಿಸಬೇಕೆಂದು ತಿಳಿಯದಿರುವುದೇ ಇದಕ್ಕೆ ಮುಖ್ಯ ಕಾರಣ. ಆದ್ದರಿಂದ ಈ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಡಿಮೆನ್ಶಿಯಾ ತಡೆಗಟ್ಟುವಿಕೆ, ಗುರುತಿಸುವಿಕೆ ಹಾಗೂ ನಿರ್ವಹಣೆ ಬಗ್ಗೆ ಸಂಶೋಧನೆಗಳನ್ನು ನಡೆಸಲಾಗುವುದು’ ಎಂದು ರಾಧಾ ಎಸ್. ಮೂರ್ತಿ ಹೇಳಿದ್ದಾರೆ.