‘ಆತ್ಮಹತ್ಯೆಯ ಆಲೋಚನೆಯನ್ನು ಹೊಂದಿರುವವರಿಗೆ ಹೊಸ ಭರವಸೆ ಮೂಡಿಸಬೇಕು. ಕೋವಿಡ್ ಕಾಣಿಸಿಕೊಂಡ ಬಳಿಕ ಹಲವಾರು ಮಂದಿ ಉದ್ಯೋಗ ಕಳೆದುಕೊಂಡು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಕೂಡ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಿದೆ. ಅದೇ ರೀತಿ, ಕೌಟುಂಬಿಕ ಸಮಸ್ಯೆ,ವೃತ್ತಿ ಸ್ಥಳದಲ್ಲಿ ಮಾನಸಿಕ ಒತ್ತಡ ಸೇರಿದಂತೆ ವಿವಿಧ ಸಮಸ್ಯೆಗಳಿಂದಲೂ ಕೆಲವರು ಆತ್ಮಹತ್ಯೆಯ ಹಾದಿ ಹಿಡಿಯುವ ಸಾಧ್ಯತೆ ಇರುತ್ತದೆ’ ಎಂದು ಸಂಸ್ಥೆಯ ಮಾನಸಿಕ ಆರೋಗ್ಯ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ. ಮೀನಾ ಕೆ.ಎಸ್. ತಿಳಿಸಿದ್ದಾರೆ.