ಬೆಂಗಳೂರು: ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಪಾದಯಾತ್ರೆಯು ಇಂದು ಮುಂಜಾನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ಗೆ ತಲುಪಿತು.
ಸಾವಿರಾರು ಸಂಖ್ಯೆಯಲ್ಲಿದ್ದ ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಮತ್ತು ಹಲವಾರು ಮುಖಂಡರು ಭಾಗಿಯಾಗಿದ್ದರು.
ಬುಧವಾರ ಮುಂಜಾನೆ 6 ಕ್ಕೆ ಮಾದನಾಯಕನಹಳ್ಳಿಯಿಂದ ಹೊರಟು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ 10.30ಕ್ಕೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ಗೆ ಬಂದು ತಲುಪಿದೆ. ಜ.15ರಂದು ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿತ್ತು.