ಅಖಿಲ ಭಾರತೀಯ ಭ್ರಷ್ಟಾಚಾರ ನಿಗ್ರಹ ಸೊಸೈಟಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶರದ್ ಆಜಾದ್ ಎಂಬುವರು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಜಾಗೃತಿ ವಿಭಾಗಕ್ಕೆ ದೂರು ನೀಡಿದ್ದರು. ಅದೇ ದೂರು ಉಲ್ಲೇಖಿಸಿ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದ ಡಿಪಿಎಆರ್ ಅಧೀನ ಕಾರ್ಯದರ್ಶಿ, ‘ನಿಯಮಗಳ ಅನುಸಾರ ಕ್ರಮ ಕೈಗೊಂಡು ದೂರುದಾರರಿಗೆ ಮಾಹಿತಿ ನೀಡಿ’ ಎಂದಿದ್ದರು.