<p><strong>ಯಲಹಂಕ:</strong> ಗಣಿತದ ಅಂಕಿ-ಅಂಶಗಳ ಆಧಾರದ ಮೇಲೆ ಅತ್ಯಂತ ಅಲ್ಪಾವಧಿಯಲ್ಲಿ ಪರಿಹಾರಗಳನ್ನು ಸೂಚಿಸಲು ಮತ್ತು ಕೆಲಸದ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆಯು ಮನುಷ್ಯನ ಜೀವನಕ್ಕೆ ಅಗತ್ಯವಾಗಿ ಬೇಕಾಗಿದೆ ಎಂದು ಸ್ಪೇನ್ ದೇಶದ ಸಾಲಮಂಕ ವಿಶ್ವವಿದ್ಯಾಲಯದ ಮುಖ್ಯಾಧಿಕಾರಿ ಜುವಾನ್ ಮ್ಯಾನುಯಲ್ ಕೊರ್ಚಾಡೊ ಅಭಿಪ್ರಾಯಪಟ್ಟರು.</p>.<p>ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐಇಇಇ ಬೆಂಗಳೂರು ಶಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಅಂತರ್ಜಾಲ, ಬಹುಮಾಧ್ಯಮ ಹಾಗೂ ಮಾಹಿತಿ ತಂತ್ರಜ್ಞಾನಗಳ ಕುರಿತ ಎರಡು ದಿನಗಳ ‘ಎನ್ಎಂಐಟಿ.ಕಾನ್-2025ʼ ಅಂತರರಾಷ್ಟ್ರೀಯ ಸಮ್ಮೇಳನವನ್ನು(ಮೂರನೇ ಆವೃತ್ತಿ) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃತಕ ಬುದ್ದಿಮತ್ತೆ ಮತ್ತು ಅದರ ಮುಂದುವರಿದ ತಂತ್ರಜ್ಞಾನಗಳು ಮನುಷ್ಯನ ಸೃಷ್ಟಿಗಳೇ ಆಗಿವೆ. ಇದರಿಂದ ಮುನುಷ್ಯ ಉದ್ಯೋಗ ಕಳೆದುಕೊಳ್ಳುವುದಿಲ್ಲ, ಬದಲಿಗೆ ಆ ಉದ್ಯೋಗ ಬೇರೆ ಸ್ವರೂಪದಲ್ಲಿರುತ್ತದೆ’ ಎಂದರು.</p>.<p>ಥಾಯ್ಲೆಂಡ್ ದೇಶದ ಚುಲಾಲಾಂಗ್ಕಾರ್ನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸುಪವದೀ ಅರಂವಿತ್ ಮಾತನಾಡಿದರು.</p>.<p>ವಿಶ್ವದ ವಿವಿಧ ಭಾಗಗಳಿಂದ ಬಂದಿರುವ ಸಂಶೋಧನಾ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಮಂಡಿಸಲು ಒಟ್ಟು 4260 ಸಂಶೋಧನಾ ಪ್ರಬಂಧ-ಪ್ರಾಜೆಕ್ಟ್ಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ 289 ಸಂಶೋಧನಾ ಪ್ರಾಜೆಕ್ಟ್ಗಳನ್ನು ಸಾದರಪಡಿಸಲು ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಪ್ರಬಂಧಗಳಿಗೆ ಪ್ರಶಸ್ತಿಪತ್ರ ನೀಡಲಾಗುವುದು ಎಂದು ಪ್ರಾಚಾರ್ಯ ಎಚ್.ಸಿ.ನಾಗರಾಜ್ ಮಾಹಿತಿ ನೀಡಿದರು.</p>.<p>ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪರಮೇಶಾಚಾರಿ.ಬಿ.ಡಿ, ನಿಟ್ಟೆ ಶಿಕ್ಷಣಸಂಸ್ಥೆಯ ಆಡಳಿತಾಧಿಕಾರಿ ರೋಹಿತ್ ಪೂಂಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಗಣಿತದ ಅಂಕಿ-ಅಂಶಗಳ ಆಧಾರದ ಮೇಲೆ ಅತ್ಯಂತ ಅಲ್ಪಾವಧಿಯಲ್ಲಿ ಪರಿಹಾರಗಳನ್ನು ಸೂಚಿಸಲು ಮತ್ತು ಕೆಲಸದ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆಯು ಮನುಷ್ಯನ ಜೀವನಕ್ಕೆ ಅಗತ್ಯವಾಗಿ ಬೇಕಾಗಿದೆ ಎಂದು ಸ್ಪೇನ್ ದೇಶದ ಸಾಲಮಂಕ ವಿಶ್ವವಿದ್ಯಾಲಯದ ಮುಖ್ಯಾಧಿಕಾರಿ ಜುವಾನ್ ಮ್ಯಾನುಯಲ್ ಕೊರ್ಚಾಡೊ ಅಭಿಪ್ರಾಯಪಟ್ಟರು.</p>.<p>ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐಇಇಇ ಬೆಂಗಳೂರು ಶಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಅಂತರ್ಜಾಲ, ಬಹುಮಾಧ್ಯಮ ಹಾಗೂ ಮಾಹಿತಿ ತಂತ್ರಜ್ಞಾನಗಳ ಕುರಿತ ಎರಡು ದಿನಗಳ ‘ಎನ್ಎಂಐಟಿ.ಕಾನ್-2025ʼ ಅಂತರರಾಷ್ಟ್ರೀಯ ಸಮ್ಮೇಳನವನ್ನು(ಮೂರನೇ ಆವೃತ್ತಿ) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃತಕ ಬುದ್ದಿಮತ್ತೆ ಮತ್ತು ಅದರ ಮುಂದುವರಿದ ತಂತ್ರಜ್ಞಾನಗಳು ಮನುಷ್ಯನ ಸೃಷ್ಟಿಗಳೇ ಆಗಿವೆ. ಇದರಿಂದ ಮುನುಷ್ಯ ಉದ್ಯೋಗ ಕಳೆದುಕೊಳ್ಳುವುದಿಲ್ಲ, ಬದಲಿಗೆ ಆ ಉದ್ಯೋಗ ಬೇರೆ ಸ್ವರೂಪದಲ್ಲಿರುತ್ತದೆ’ ಎಂದರು.</p>.<p>ಥಾಯ್ಲೆಂಡ್ ದೇಶದ ಚುಲಾಲಾಂಗ್ಕಾರ್ನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸುಪವದೀ ಅರಂವಿತ್ ಮಾತನಾಡಿದರು.</p>.<p>ವಿಶ್ವದ ವಿವಿಧ ಭಾಗಗಳಿಂದ ಬಂದಿರುವ ಸಂಶೋಧನಾ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಮಂಡಿಸಲು ಒಟ್ಟು 4260 ಸಂಶೋಧನಾ ಪ್ರಬಂಧ-ಪ್ರಾಜೆಕ್ಟ್ಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ 289 ಸಂಶೋಧನಾ ಪ್ರಾಜೆಕ್ಟ್ಗಳನ್ನು ಸಾದರಪಡಿಸಲು ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಪ್ರಬಂಧಗಳಿಗೆ ಪ್ರಶಸ್ತಿಪತ್ರ ನೀಡಲಾಗುವುದು ಎಂದು ಪ್ರಾಚಾರ್ಯ ಎಚ್.ಸಿ.ನಾಗರಾಜ್ ಮಾಹಿತಿ ನೀಡಿದರು.</p>.<p>ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪರಮೇಶಾಚಾರಿ.ಬಿ.ಡಿ, ನಿಟ್ಟೆ ಶಿಕ್ಷಣಸಂಸ್ಥೆಯ ಆಡಳಿತಾಧಿಕಾರಿ ರೋಹಿತ್ ಪೂಂಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>