<p><strong>ಬಳ್ಳಾರಿ</strong>: ‘ಹಿಂದೂಗಳನ್ನು ಕೆಣಕದಿರಿ’ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಬಳಿಕ ಬಂಧನ ಭೀತಿ ಎದುರಿಸುತ್ತಿದ್ದ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿತು.</p>.<p>ವಕೀಲ ಸಿದ್ಧಾರೆಡ್ಡಿ ಅವರ ಮೂಲಕ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ‘ಕೋಮು ಸೌಹಾರ್ದ ಕದಡುವ ಗಂಭೀರ ಪ್ರಯತ್ನ ನಡೆಸಿರುವುದರಿಂದ ರೆಡ್ಡಿಯವರಿಗೆ ಜಾಮೀನು ನೀಡಬಾರದು’ ಎಂದು ಸರ್ಕಾರಿ ಅಭಿಯೋಜಕ ಸುಂಕಣ್ಣ ಅವರ ವಾದವನ್ನು ನ್ಯಾಯಾಧೀಶರು ಎತ್ತಿಹಿಡಿದರು.</p>.<p>ನಗರದಲ್ಲಿ ಜನವರಿ 3ರಂದು ದೇಶಭಕ್ತ ನಾಗರಿಕರ ವೇದಿಕೆಯು ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಹಮ್ಮಿಕೊಂಡಿದ್ದ ಜಾಗೃತಿ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ರೆಡ್ಡಿ ಮಾತನಾಡಿದ್ದರು. ಬಳಿಕ ಅವರ ವಿರುದ್ಧ ಗಾಂಧಿನಗರ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಹಿಂದೂಗಳನ್ನು ಕೆಣಕದಿರಿ’ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಬಳಿಕ ಬಂಧನ ಭೀತಿ ಎದುರಿಸುತ್ತಿದ್ದ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿತು.</p>.<p>ವಕೀಲ ಸಿದ್ಧಾರೆಡ್ಡಿ ಅವರ ಮೂಲಕ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ‘ಕೋಮು ಸೌಹಾರ್ದ ಕದಡುವ ಗಂಭೀರ ಪ್ರಯತ್ನ ನಡೆಸಿರುವುದರಿಂದ ರೆಡ್ಡಿಯವರಿಗೆ ಜಾಮೀನು ನೀಡಬಾರದು’ ಎಂದು ಸರ್ಕಾರಿ ಅಭಿಯೋಜಕ ಸುಂಕಣ್ಣ ಅವರ ವಾದವನ್ನು ನ್ಯಾಯಾಧೀಶರು ಎತ್ತಿಹಿಡಿದರು.</p>.<p>ನಗರದಲ್ಲಿ ಜನವರಿ 3ರಂದು ದೇಶಭಕ್ತ ನಾಗರಿಕರ ವೇದಿಕೆಯು ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಹಮ್ಮಿಕೊಂಡಿದ್ದ ಜಾಗೃತಿ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ರೆಡ್ಡಿ ಮಾತನಾಡಿದ್ದರು. ಬಳಿಕ ಅವರ ವಿರುದ್ಧ ಗಾಂಧಿನಗರ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>