<p><strong>ಬೆಂಗಳೂರು</strong>: ನಕ್ಷೆ ಮಂಜೂರಾತಿ ಇಲ್ಲದಿದ್ದರೆ ಯಾವುದೇ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p>.<p>ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿದ್ಯುತ್ ಸಂಪರ್ಕ ನೀಡುವ ಮೊದಲು, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಬಳಗೆರೆ ರಸ್ತೆಯಲ್ಲಿ ಬೆಸ್ಕಾಂ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸವನ್ನು ವೇಗಗೊಳಿಸಲು ನಿರ್ದೇಶನ ನೀಡಿದರು.</p>.<p>ಇಬ್ಲೂರು ಜಂಕ್ಷನ್ ಬಳಿ ಮೇಲ್ಸೇತುವೆ ಕೆಳಭಾಗದಲ್ಲಿ ಈಗಾಗಲೇ ಸುಂದರೀಕರಣ ಮಾಡಲಾಗಿದೆ. ಇದೇ ಮಾದರಿಯಲ್ಲಿ ಇತರೆ ಮೇಲ್ಸೇತುವೆಗಳ ಕೆಳಭಾಗದಲ್ಲಿ ಸಿ.ಎಸ್.ಆರ್ ನಿಧಿಯಲ್ಲಿ ಅಭಿವೃದ್ಧಿಪಡಿಸಲು ಸೂಚನೆ ನೀಡಿದರು.</p>.<p>ಮಹದೇವಪುರ ವ್ಯಾಪ್ತಿಯ ರಾಜಕಾಲುವೆ ಒತ್ತುವರಿ ಪ್ರಕರಣಗಳನ್ನು ಪರಿಶೀಲಿಸಿ ತಕ್ಷಣವೇ ತೆರವುಗೊಳಿಸಬೇಕು. ಗುಂಜೂರು ಪ್ರದೇಶದಲ್ಲಿ ರಾಜಕಾಲುವೆ ಮೇಲಿನ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ ಎಂದು ಹೇಳಿದರು.</p>.<p>ನ್ಯೂ ಹಾರಿಜನ್ ಕಾಲೇಜು ಬಳಿಯ ಎಸ್.ಎಚ್ 45 ವರ್ತೂರು-ಗುಂಜೂರು ಮುಖ್ಯ ರಸ್ತೆಯ ಬಳಿ, ಹೊಸದಾಗಿ ರಸ್ತೆ ನಿರ್ಮಾಣ ಮಾಡಲು 6 ಎಕರೆ ಅರಣ್ಯ ಜಾಗ ನೀಡಿದರೆ, ಈ ಭಾಗದಲ್ಲಿ ಬಹುತೇಕ ಸಂಚಾರ ದಟ್ಟಣೆ ನಿವಾರಣೆಯಾಲಿದೆ. ಈ ಸಂಬಂಧ ಅರಣ್ಯ ಜಾಗ ವಶಪಡಿಸಿಕೊಂಡು, ರಸ್ತೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸೂಚನೆ ನೀಡಿದರು.</p>.<p>ಪೂರ್ವ ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್, ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ ಕೆ, ಸುಧಾ, ಮುಖ್ಯ ಎಂಜಿನಿಯರ್ಗಳಾದ ಲೋಕೇಶ್ ಹಾಗೂ ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<p><strong>ಮಹೇಶ್ವರ್ ಅವರ ಸೂಚನೆಗಳು</strong></p><p>* ಹೊರ ವರ್ತುಲ ರಸ್ತೆಯ ಬಸ್ ನಿಲ್ದಾಣಗಳಲ್ಲಿ ಅಗತ್ಯ ಸುಧಾರಣೆ ಮಾಡಿ * ಸರ್ಜಾಪುರ–ಇಬ್ಲೂರು ಮಾರ್ಗದಲ್ಲಿ ಪಾದಚಾರಿ ಸೇತುವೆ ನಿರ್ಮಿಸಿ • ಇಬ್ಲೂರು–ಕಾರ್ಮೆಲ್ರಾಂ–ಸರ್ಜಾಪುರ ಮಾರ್ಗದಲ್ಲಿ ಪಾದಚಾರಿ ಮಾರ್ಗ ಮತ್ತು ಸೈಕ್ಲಿಂಗ್ ಟ್ರ್ಯಾಕ್ ನಿರ್ಮಿಸಿ * 60 ಕಿಮೀ ವ್ಯಾಪ್ತಿಯ ಸಿಡಿಪಿ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಟಾಸ್ಕ್ ಫೋರ್ಸ್ ರಚಿಸಿ * ಇಬ್ಲೂರು ಜಂಕ್ಷನ್ನಲ್ಲಿ ವೈಜ್ಞಾನಿಕ ಟ್ರಾಫಿಕ್ ವಿನ್ಯಾಸಗೊಳಿಸಿ * ಟ್ರಿಪಲ್-ಡೆಕ್ಕರ್ ಮೂಲಕ ಮೂಲಸೌಕರ್ಯ ವಿಸ್ತರಣೆ ಮಾಡಿ * ಒಆರ್ಆರ್ ಸುತ್ತಮುತ್ತಲಿನ ಸಮಸ್ಯೆಗಳ ಸಾಮೂಹಿಕ ಪರಿಹಾರಕ್ಕಾಗಿ ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆಗಳ ಸಂಯುಕ್ತ ಸಮಿತಿ ರಚಿಸಿ * 23 ಒಣ ಕಸ ಸಂಗ್ರಹ ಕೇಂದ್ರ ಆರು ತಿಂಗಳಲ್ಲಿ ಸ್ಥಾಪಸಿ * ವರ್ತೂರಿನಲ್ಲಿ ಒಣಕಸ ಘಟಕ ಶೀಘ್ರ ಆರಂಭಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಕ್ಷೆ ಮಂಜೂರಾತಿ ಇಲ್ಲದಿದ್ದರೆ ಯಾವುದೇ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p>.<p>ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿದ್ಯುತ್ ಸಂಪರ್ಕ ನೀಡುವ ಮೊದಲು, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಬಳಗೆರೆ ರಸ್ತೆಯಲ್ಲಿ ಬೆಸ್ಕಾಂ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸವನ್ನು ವೇಗಗೊಳಿಸಲು ನಿರ್ದೇಶನ ನೀಡಿದರು.</p>.<p>ಇಬ್ಲೂರು ಜಂಕ್ಷನ್ ಬಳಿ ಮೇಲ್ಸೇತುವೆ ಕೆಳಭಾಗದಲ್ಲಿ ಈಗಾಗಲೇ ಸುಂದರೀಕರಣ ಮಾಡಲಾಗಿದೆ. ಇದೇ ಮಾದರಿಯಲ್ಲಿ ಇತರೆ ಮೇಲ್ಸೇತುವೆಗಳ ಕೆಳಭಾಗದಲ್ಲಿ ಸಿ.ಎಸ್.ಆರ್ ನಿಧಿಯಲ್ಲಿ ಅಭಿವೃದ್ಧಿಪಡಿಸಲು ಸೂಚನೆ ನೀಡಿದರು.</p>.<p>ಮಹದೇವಪುರ ವ್ಯಾಪ್ತಿಯ ರಾಜಕಾಲುವೆ ಒತ್ತುವರಿ ಪ್ರಕರಣಗಳನ್ನು ಪರಿಶೀಲಿಸಿ ತಕ್ಷಣವೇ ತೆರವುಗೊಳಿಸಬೇಕು. ಗುಂಜೂರು ಪ್ರದೇಶದಲ್ಲಿ ರಾಜಕಾಲುವೆ ಮೇಲಿನ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ ಎಂದು ಹೇಳಿದರು.</p>.<p>ನ್ಯೂ ಹಾರಿಜನ್ ಕಾಲೇಜು ಬಳಿಯ ಎಸ್.ಎಚ್ 45 ವರ್ತೂರು-ಗುಂಜೂರು ಮುಖ್ಯ ರಸ್ತೆಯ ಬಳಿ, ಹೊಸದಾಗಿ ರಸ್ತೆ ನಿರ್ಮಾಣ ಮಾಡಲು 6 ಎಕರೆ ಅರಣ್ಯ ಜಾಗ ನೀಡಿದರೆ, ಈ ಭಾಗದಲ್ಲಿ ಬಹುತೇಕ ಸಂಚಾರ ದಟ್ಟಣೆ ನಿವಾರಣೆಯಾಲಿದೆ. ಈ ಸಂಬಂಧ ಅರಣ್ಯ ಜಾಗ ವಶಪಡಿಸಿಕೊಂಡು, ರಸ್ತೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸೂಚನೆ ನೀಡಿದರು.</p>.<p>ಪೂರ್ವ ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್, ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ ಕೆ, ಸುಧಾ, ಮುಖ್ಯ ಎಂಜಿನಿಯರ್ಗಳಾದ ಲೋಕೇಶ್ ಹಾಗೂ ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<p><strong>ಮಹೇಶ್ವರ್ ಅವರ ಸೂಚನೆಗಳು</strong></p><p>* ಹೊರ ವರ್ತುಲ ರಸ್ತೆಯ ಬಸ್ ನಿಲ್ದಾಣಗಳಲ್ಲಿ ಅಗತ್ಯ ಸುಧಾರಣೆ ಮಾಡಿ * ಸರ್ಜಾಪುರ–ಇಬ್ಲೂರು ಮಾರ್ಗದಲ್ಲಿ ಪಾದಚಾರಿ ಸೇತುವೆ ನಿರ್ಮಿಸಿ • ಇಬ್ಲೂರು–ಕಾರ್ಮೆಲ್ರಾಂ–ಸರ್ಜಾಪುರ ಮಾರ್ಗದಲ್ಲಿ ಪಾದಚಾರಿ ಮಾರ್ಗ ಮತ್ತು ಸೈಕ್ಲಿಂಗ್ ಟ್ರ್ಯಾಕ್ ನಿರ್ಮಿಸಿ * 60 ಕಿಮೀ ವ್ಯಾಪ್ತಿಯ ಸಿಡಿಪಿ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಟಾಸ್ಕ್ ಫೋರ್ಸ್ ರಚಿಸಿ * ಇಬ್ಲೂರು ಜಂಕ್ಷನ್ನಲ್ಲಿ ವೈಜ್ಞಾನಿಕ ಟ್ರಾಫಿಕ್ ವಿನ್ಯಾಸಗೊಳಿಸಿ * ಟ್ರಿಪಲ್-ಡೆಕ್ಕರ್ ಮೂಲಕ ಮೂಲಸೌಕರ್ಯ ವಿಸ್ತರಣೆ ಮಾಡಿ * ಒಆರ್ಆರ್ ಸುತ್ತಮುತ್ತಲಿನ ಸಮಸ್ಯೆಗಳ ಸಾಮೂಹಿಕ ಪರಿಹಾರಕ್ಕಾಗಿ ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆಗಳ ಸಂಯುಕ್ತ ಸಮಿತಿ ರಚಿಸಿ * 23 ಒಣ ಕಸ ಸಂಗ್ರಹ ಕೇಂದ್ರ ಆರು ತಿಂಗಳಲ್ಲಿ ಸ್ಥಾಪಸಿ * ವರ್ತೂರಿನಲ್ಲಿ ಒಣಕಸ ಘಟಕ ಶೀಘ್ರ ಆರಂಭಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>