ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ‘ಸಾಕುನಾಯಿಗಳಿಗೆ ನಿರ್ಬಂಧ’ ಫಲಕ

Last Updated 28 ಜೂನ್ 2022, 22:08 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಯುವಿಹಾರಕ್ಕೆ ಸಾಕು ನಾಯಿಗಳನ್ನು ಕರೆದೊಯ್ಯದಂತೆ ನಿರ್ಬಂಧ ಹೇರಲಾಗಿದೆ ಎಂಬ ಫಲಕಗಳನ್ನು ತೋಟಗಾರಿಕೆ ಇಲಾಖೆ ಅಳವಡಿಸಿದೆ.

ಜುಲೈ 1ರಿಂದ ಸಾಕುನಾಯಿಗಳನ್ನು ಕರೆತರಬಾರದು ಎಂದು ತಿಳಿಸಲಾಗಿದೆ. ನಾಯಿಗಳು ಪದೇ ಪದೇ ತೊಂದರೆ ನೀಡುತ್ತಿರುವ ಬಗ್ಗೆ ವಾಯುವಿಹಾರಿಗಳಿಂದ ದೂರುಗಳು ಸಲ್ಲಿಕೆಯಾಗಿರುವುದರಿಂದ ನಿಷೇಧ ಹೇರುವ ಬಗ್ಗೆ ತೋಟಗಾರಿಕೆ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ.

ಉದ್ಯಾನಗಳು ಮತ್ತು ಸಾರ್ವಜನಿಕ ಸ್ಥಳಗಳ ನಿಯಮಾವಳಿಗಳ ಅನ್ವಯ ನಿಷೇಧ ಹೇರುವ ಕುರಿತು ತೋಟಗಾರಿಕೆ ಸಚಿವರನ್ನು ಒಳಗೊಂಡ ಸಮಿತಿಯು ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರಕೈಗೊಳ್ಳುವ ಸಾಧ್ಯತೆ ಇದೆ. ಆದಕ್ಕೂ ಮೊದಲೇ ಫಲಕಗಳನ್ನು ಅಳವಡಿಸಲಾಗಿದ್ದರೂ ಜುಲೈ 1ರಿಂದ ಜಾರಿಗೆ ಬರುವುದಿಲ್ಲ. ಸಮಿತಿಯು ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT