<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. </p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರ ಕಾಳಜಿ ಇದೆ. ಆದ್ದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ. ಈ ಬಗ್ಗೆ ಯಾರೂ ಹೆದರುವ ಅಗತ್ಯವಿಲ್ಲ’ ಎಂದು ಭರವಸೆ ನೀಡಿದರು. </p>.<p>‘ರಾಜ್ಯದಲ್ಲಿ ಇರುವ ಪ್ರತಿಯೊಂದು ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಹತ್ತಾರು ವರ್ಷಗಳಿಂದ ತಾಂಡಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ’ ಎಂದರು.</p>.<p>‘ಸಾಧು- ಸಂತರ ಸಾಲಿನಲ್ಲಿ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲೇ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸೇವಾಲಾಲ್ ಅವರು, ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು’ ಎಂದು ಸ್ಮರಿಸಿದರು. </p>.<div><blockquote>ಬಂಜಾರ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಈ ಹಿಂದೆ ಎರಡು ಬಾರಿ ಮಾಡಲಾಗಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈಗ ಮತ್ತೊಮ್ಮೆ ಶಿಫಾರಸು ಮಾಡಲಾಗುವುದು </blockquote><span class="attribution">– ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. </p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರ ಕಾಳಜಿ ಇದೆ. ಆದ್ದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ. ಈ ಬಗ್ಗೆ ಯಾರೂ ಹೆದರುವ ಅಗತ್ಯವಿಲ್ಲ’ ಎಂದು ಭರವಸೆ ನೀಡಿದರು. </p>.<p>‘ರಾಜ್ಯದಲ್ಲಿ ಇರುವ ಪ್ರತಿಯೊಂದು ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಹತ್ತಾರು ವರ್ಷಗಳಿಂದ ತಾಂಡಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ’ ಎಂದರು.</p>.<p>‘ಸಾಧು- ಸಂತರ ಸಾಲಿನಲ್ಲಿ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲೇ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸೇವಾಲಾಲ್ ಅವರು, ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು’ ಎಂದು ಸ್ಮರಿಸಿದರು. </p>.<div><blockquote>ಬಂಜಾರ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಈ ಹಿಂದೆ ಎರಡು ಬಾರಿ ಮಾಡಲಾಗಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈಗ ಮತ್ತೊಮ್ಮೆ ಶಿಫಾರಸು ಮಾಡಲಾಗುವುದು </blockquote><span class="attribution">– ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>