ಬೆಂಗಳೂರು: ‘ಬನಶಂಕರಿಯಲ್ಲಿ ಕೆಲವು ಗಂಟೆಗಳ ಹಿಂದೆ ಸುಂದರ ಪ್ರಾಣಿಯೊಂದು ಕಾಣಿಸಿಕೊಂಡಿದೆ. ಆ ಪ್ರದೇಶದಲ್ಲಿ ಓಡಾಡುವವರು ಜಾಗೃತಿಯಿಂದಿರಬೇಕು’ ಎಂಬ ವಾಕ್ಯಗಳ ಜೊತೆಗೆ, ಚಿರತೆ ಮರಿಯ ಚಿತ್ರವಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ’ಇದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ‘ ಎಂದು ವನ್ಯಜೀವಿ ವಿಜ್ಞಾನಿಗಳು ಹೇಳಿದ್ದಾರೆ.