‘ದರ್ಶನ್ ಅವರು ಪೀಣ್ಯ 2ನೇ ಹಂತದ ಬಸ್ ತಂಗುದಾಣದ ಬಳಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾಸ್ಕ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ಬಾಲು, ಮಾರ್ಷಲ್ ಜೊತೆ ಜಗಳ ತೆಗೆದಿದ್ದ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ. ಗುರುವಾರ ನಮಗೆ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.