ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ಹೀಗಾಗಿ ಕೋವಿಡ್ 19 ವ್ಯಾಪಕವಾಗಿ ಹರಡುವ ಭಯ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿ ಮಂಗಳವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರಲ್ಲಿ ಭಯಪಡುವ ಅಗತ್ಯವಿಲ್ಲಎಂದು ಭರವಸೆ ನೀಡಿದರು.
ಹಾಸನ, ಮೈಸೂರು, ಶಿವಮೊಗ್ಗದ ವೈದ್ಯಕೀಯ ಕಾಲೇಜುಗಳಲ್ಲಿ ಸೋಂಕು ತಪಾಸಣಾ ಕೇಂದ್ರ ಆರಂಭವಾಗಿದೆ. ರಾಜ್ಯದಲ್ಲಿ ಈಗಾಗಲೇ ಸೋಂಕು ಪತ್ತೆಯಾಗಿರುವ ಎಲ್ಲ ನಾಲ್ವರ ಆರೋಗ್ಯವೂ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದರು.