ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19 ಹರಡುವ ಭೀತಿ ಬೇಡ: ಆರೋಗ್ಯ ಸಚಿವ ಅಭಯ

Last Updated 10 ಮಾರ್ಚ್ 2020, 11:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ಹೀಗಾಗಿ ಕೋವಿಡ್ 19 ವ್ಯಾಪಕವಾಗಿ ಹರಡುವ ಭಯ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ನಗರದಲ್ಲಿ ಮಂಗಳವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರಲ್ಲಿ ಭಯಪಡುವ ಅಗತ್ಯವಿಲ್ಲಎಂದು ಭರವಸೆ ನೀಡಿದರು.

ಹಾಸನ, ಮೈಸೂರು, ಶಿವಮೊಗ್ಗದ ವೈದ್ಯಕೀಯ ಕಾಲೇಜುಗಳಲ್ಲಿ ಸೋಂಕು ತಪಾಸಣಾ ಕೇಂದ್ರ ಆರಂಭವಾಗಿದೆ. ರಾಜ್ಯದಲ್ಲಿ ಈಗಾಗಲೇ ಸೋಂಕು ಪತ್ತೆಯಾಗಿರುವ ಎಲ್ಲ ನಾಲ್ವರ ಆರೋಗ್ಯವೂ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT