'ನಗರದಲ್ಲಿ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ ನೀಡಲಾಗುವುದು. ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆಗೆ ಬಂದರೆ, ಅಂಥ ಪ್ರತಿಭಟನಾಕಾರರನ್ನು ನಗರದ ಒಳಗೆ ಬಿಡುವುದಿಲ್ಲ' ಎಂದೂ ತಿಳಿಸಿದರು.
'ನಗರದಲ್ಲಿ ಹಿಂದೆ ಎಂದೂ ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆ ನಡೆದಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅನುಮತಿ ಕೋರಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದೂ ಕಮಲ್ ಪಂತ್ ತಿಳಿಸಿದರು.