ಮಧುಮೇಹ, ರಕ್ತದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಆರೋಗ್ಯದ ದೃಷ್ಟಿಯಿಂದ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಬಾರದು. ಪೊಲೀಸ್ ಠಾಣೆ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದೂ ಆದೇಶದಲ್ಲಿ ಅವರು ತಿಳಿಸಿದ್ದಾರೆ.