<p><strong>ಹೆಸರಘಟ್ಟ (ಬೆಂಗಳೂರು):</strong>ಶಿವಕೋಟೆ ಮತ್ತು ಸೊಣೇನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹತ್ತು ತಿಂಗಳುಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಗೌರವಧನ ನೀಡಿಲ್ಲ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ.</p>.<p>‘ಮತ್ಕೂರು, ಕೊಲುವರಾಯಹಳ್ಳಿ, ಹಾರೋಹಳ್ಳಿ ಪಾಳ್ಯ, ಕಾಕೋಳು, ಬೈರಾಪುರ, ಅರಕೆರೆ, ಬ್ಯಾತ, ಸೀತಕೆಂಪನಹಳ್ಳಿ, ಬುಡವನಹಳ್ಳಿ ಗ್ರಾಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕಿಯರು ಮತ್ತು ಸಹಾಯಕರಿಗೆ ಕಳೆದ ಹತ್ತು ತಿಂಗಳಿನಿಂದ ಗೌರವ ಸಂಭಾವನೆಯನ್ನು ನೀಡಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಏನೇನೋ ಸಬೂಬು ಹೇಳಿ ಕಳುಹಿಸುತ್ತಿದ್ದಾರೆ’ ಎಂದು ಕಾರ್ಯಕರ್ತೆಯೊಬ್ಬರು ದೂರಿದರು.</p>.<p>‘ಕೊರೊನಾ ಸೋಂಕಿನ ವಿರುದ್ಧ ನಾವೂ ಕೆಲಸ ಮಾಡುತ್ತಿದ್ದೇವೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ. ಆದರೂ ನಮಗೆ ಹತ್ತು ತಿಂಗಳಿಂದ ವೇತನ ನೀಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗರ್ಭಿಣಿಯರಿಗೆ ಮೊಟ್ಟೆಯನ್ನು ನೀಡುತ್ತಿದ್ದೇವೆ. ಅದರ ಬಿಲ್ ಕೂಡ ನಮಗೆ ಪಾವತಿಸಿಲ್ಲ. ಕೈಯಿಂದ ದುಡ್ಡು ಹಾಕಿ ಮೊಟ್ಟೆಯನ್ನು ಕೊಟ್ಟಿದ್ದೇವೆ. ಹತ್ತು ತಿಂಗಳಿನಿಂದ ಕೈಯಿಂದಲೇ ಖರ್ಚು ಮಾಡುತ್ತಿದ್ದೇವೆ. ಕುಡಿಯುವ ನೀರಿಗೂ ನಾವೇ ದುಡ್ಡು ಕೊಡುತ್ತಿದ್ದೇವೆ’ ಎಂದು ಅಂಗನವಾಡಿ ಶಿಕ್ಷಕಿಯೊಬ್ಬರು ಹೇಳಿದರು.</p>.<p>‘ಮನೆ ಬಾಡಿಗೆ ಕಟ್ಟುವುದಕ್ಕೂ ಕಷ್ಟವಾಗಿದೆ. ಒಂದೆರಡು ತಿಂಗಳಾದರೆ ಹೇಗೋ ನಿಭಾಯಿಸಬಹುದು. ಆದರೆ ಹತ್ತು ತಿಂಗಳುಗಳಿಂದ ವೇತನವಿಲ್ಲದೆ ನಲುಗಿ ಹೋಗಿದ್ದೇವೆ. ನಮ್ಮ ಕಷ್ಟಗಳನ್ನು ಮೇಲಧಿಕಾರಿಗಳು ಅರ್ಥ ಮಾಡಿಕೊಳ್ಳುತ್ತಿಲ್ಲ’ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದರು.</p>.<p>ಯಲಹಂಕದ ಸಿಡಿಪಿಓ ಎನ್.ಎನ್. ವಿಜಯ್ ಕುಮಾರ್ ಪ್ರತಿಕ್ರಿಯಿಸಿ ‘ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ನನ್ನ ಬಳಿ ಸಮಸ್ಯೆ ಹೇಳಿಕೊಂಡಿದ್ದಾರೆ. ನಾನು ಬಂದು ಕೇವಲ ಹದಿನೈದು ದಿನಗಳಾಗಿವೆ. ಒಂದು ವಾರದೊಳಗೆ ಗೌರವ ಸಂಭಾವನೆ ಪಾವತಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ (ಬೆಂಗಳೂರು):</strong>ಶಿವಕೋಟೆ ಮತ್ತು ಸೊಣೇನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹತ್ತು ತಿಂಗಳುಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಗೌರವಧನ ನೀಡಿಲ್ಲ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ.</p>.<p>‘ಮತ್ಕೂರು, ಕೊಲುವರಾಯಹಳ್ಳಿ, ಹಾರೋಹಳ್ಳಿ ಪಾಳ್ಯ, ಕಾಕೋಳು, ಬೈರಾಪುರ, ಅರಕೆರೆ, ಬ್ಯಾತ, ಸೀತಕೆಂಪನಹಳ್ಳಿ, ಬುಡವನಹಳ್ಳಿ ಗ್ರಾಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕಿಯರು ಮತ್ತು ಸಹಾಯಕರಿಗೆ ಕಳೆದ ಹತ್ತು ತಿಂಗಳಿನಿಂದ ಗೌರವ ಸಂಭಾವನೆಯನ್ನು ನೀಡಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಏನೇನೋ ಸಬೂಬು ಹೇಳಿ ಕಳುಹಿಸುತ್ತಿದ್ದಾರೆ’ ಎಂದು ಕಾರ್ಯಕರ್ತೆಯೊಬ್ಬರು ದೂರಿದರು.</p>.<p>‘ಕೊರೊನಾ ಸೋಂಕಿನ ವಿರುದ್ಧ ನಾವೂ ಕೆಲಸ ಮಾಡುತ್ತಿದ್ದೇವೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ. ಆದರೂ ನಮಗೆ ಹತ್ತು ತಿಂಗಳಿಂದ ವೇತನ ನೀಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗರ್ಭಿಣಿಯರಿಗೆ ಮೊಟ್ಟೆಯನ್ನು ನೀಡುತ್ತಿದ್ದೇವೆ. ಅದರ ಬಿಲ್ ಕೂಡ ನಮಗೆ ಪಾವತಿಸಿಲ್ಲ. ಕೈಯಿಂದ ದುಡ್ಡು ಹಾಕಿ ಮೊಟ್ಟೆಯನ್ನು ಕೊಟ್ಟಿದ್ದೇವೆ. ಹತ್ತು ತಿಂಗಳಿನಿಂದ ಕೈಯಿಂದಲೇ ಖರ್ಚು ಮಾಡುತ್ತಿದ್ದೇವೆ. ಕುಡಿಯುವ ನೀರಿಗೂ ನಾವೇ ದುಡ್ಡು ಕೊಡುತ್ತಿದ್ದೇವೆ’ ಎಂದು ಅಂಗನವಾಡಿ ಶಿಕ್ಷಕಿಯೊಬ್ಬರು ಹೇಳಿದರು.</p>.<p>‘ಮನೆ ಬಾಡಿಗೆ ಕಟ್ಟುವುದಕ್ಕೂ ಕಷ್ಟವಾಗಿದೆ. ಒಂದೆರಡು ತಿಂಗಳಾದರೆ ಹೇಗೋ ನಿಭಾಯಿಸಬಹುದು. ಆದರೆ ಹತ್ತು ತಿಂಗಳುಗಳಿಂದ ವೇತನವಿಲ್ಲದೆ ನಲುಗಿ ಹೋಗಿದ್ದೇವೆ. ನಮ್ಮ ಕಷ್ಟಗಳನ್ನು ಮೇಲಧಿಕಾರಿಗಳು ಅರ್ಥ ಮಾಡಿಕೊಳ್ಳುತ್ತಿಲ್ಲ’ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದರು.</p>.<p>ಯಲಹಂಕದ ಸಿಡಿಪಿಓ ಎನ್.ಎನ್. ವಿಜಯ್ ಕುಮಾರ್ ಪ್ರತಿಕ್ರಿಯಿಸಿ ‘ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ನನ್ನ ಬಳಿ ಸಮಸ್ಯೆ ಹೇಳಿಕೊಂಡಿದ್ದಾರೆ. ನಾನು ಬಂದು ಕೇವಲ ಹದಿನೈದು ದಿನಗಳಾಗಿವೆ. ಒಂದು ವಾರದೊಳಗೆ ಗೌರವ ಸಂಭಾವನೆ ಪಾವತಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>