‘ಮತ್ಕೂರು, ಕೊಲುವರಾಯಹಳ್ಳಿ, ಹಾರೋಹಳ್ಳಿ ಪಾಳ್ಯ, ಕಾಕೋಳು, ಬೈರಾಪುರ, ಅರಕೆರೆ, ಬ್ಯಾತ, ಸೀತಕೆಂಪನಹಳ್ಳಿ, ಬುಡವನಹಳ್ಳಿ ಗ್ರಾಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕಿಯರು ಮತ್ತು ಸಹಾಯಕರಿಗೆ ಕಳೆದ ಹತ್ತು ತಿಂಗಳಿನಿಂದ ಗೌರವ ಸಂಭಾವನೆಯನ್ನು ನೀಡಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಏನೇನೋ ಸಬೂಬು ಹೇಳಿ ಕಳುಹಿಸುತ್ತಿದ್ದಾರೆ’ ಎಂದು ಕಾರ್ಯಕರ್ತೆಯೊಬ್ಬರು ದೂರಿದರು.