ಉಡುಪಿ ಜಿಲ್ಲೆಯಿಂದ ನಗರಕ್ಕೆ ಬಂದಿದ್ದ ಕೆಲ ವಿದ್ಯಾರ್ಥಿನಿಯರು, ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 26 ರಂದು ಪ್ರತಿಭಟನೆ ನಡೆಸಲು ಅನುಮತಿ ಕೋರಿ ಉಪ್ಪಾರಪೇಟೆ ಠಾಣೆಗೆ ಮನವಿ ಸಲ್ಲಿಸಿದ್ದರು. ಅದಕ್ಕೂ ಮುನ್ನವೇ, ‘ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 26 ರಂದು ಪ್ರತಿಭಟನೆ ಇದೆ. ಎಲ್ಲರೂ ಬನ್ನಿ’ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದರು.