ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗಮನ ಹರಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕು. ಹಬ್ಬ ಮುಗಿಯುವವರೆಗೂ ವಿದ್ಯುತ್ ಮಾರ್ಗಗಳ ದುರಸ್ತಿ, ಜೋಡಣೆ ಹಾಗೂ ‘ಲೈನ್ ಕ್ಲಿಯರೆನ್ಸ್’ ಕಾರ್ಯ ಕೈಗೆತ್ತಿಕೊಳ್ಳದಂತೆಯೂ ಸೂಚಿಸಿದ್ದಾರೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಕಂಡುಬಂದಲ್ಲಿ ತಕ್ಷಣವೇ ಸರಿಪಡಿ ಸಬೇಕು ಎಂದು ಅವರು ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.