ಗ್ರಾಮಾಂತರ ಪ್ರದೇಶದಲ್ಲಿರುವ ಸುಮಾರು 35 ಸಾವಿರ ದೇವಾಲಯಗಳಿಗೆ ಪೂಜೆ ಸಾಮಗ್ರಿಗಳಿಗಾಗಿ ₹ 5,000 ನೀಡಲಾಗುತ್ತಿದೆ. ಬೆಲೆ ಏರಿಕೆಯಿಂದ ಈ ಮೊತ್ತವು ಸಾಕಾಗುತ್ತಿಲ್ಲ. ಪೂಜಾ ಸಾಮಗ್ರಿ ಮತ್ತು ಅರ್ಚಕರ ಸಂಭಾವನೆ ಎರಡೂ ಸೇರಿ ₹ 10,000 ನೀಡಬೇಕು. ಧಾರ್ಮಿಕ ದತ್ತಿ ಇಲಾಖೆಯಲ್ಲಿ ನೌಕರರ ಕೊರತೆ ಇದೆ. ಹೀಗಾಗಿ, ಹೊಸದಾಗಿ ನೌಕರರನ್ನು ನೇಮಕ ಮಾಡಬೇಕು ಎಂದು ಒಕ್ಕೂಟದ ಮುಖ್ಯ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಮತ್ತು ಪದಾಧಿಕಾರಿಗಳು ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.