<p><strong>ಬೆಂಗಳೂರು: </strong>‘ಕೋವಿಡ್ ಕಾರಣದಿಂದ ಈ ಬಾರಿ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು. ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ಈ ಬಾರಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.</p>.<p>‘ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ಮಂಗಳವಾರ ಬೆಳಿಗ್ಗೆ 9ಕ್ಕೆ ರಾಜ್ಯಪಾಲರು ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ. ಗೌರವ ರಕ್ಷೆ ಸ್ವೀಕರಿಸಿ, ರಾಜ್ಯದ ಜನರಿಗೆ 71ನೇ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p class="Subhead"><strong>21 ತುಕಡಿಗಳಿಂದ ಪಥಸಂಚಲನ</strong></p>.<p>ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಂಚಾರ ಪೊಲೀಸರು, ಅಗ್ನಿಶಾಮಕ ದಳ, ಶ್ವಾನದಳ ಮತ್ತು ಬ್ಯಾಂಡ್ ಸೇರಿದಂತೆ ಒಟ್ಟು 21 ತುಕಡಿಗಳಲ್ಲಿ 750 ಮಂದಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p class="Subhead">500 ಆಸನ ವ್ಯವಸ್ಥೆ: ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು <strong>ಎಂದು ಸೂಚಿಸಲಾಗಿದೆ. ಕಾರ್ಯಕ್ರಮದ ನೇರಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ.</strong></p>.<p class="Subhead"><strong>ವಿಪತ್ತು ನಿರ್ವಹಣೆಗೆ ಸಜ್ಜು</strong></p>.<p class="Subhead">ಕಾರ್ಯಕ್ರಮದ ವೇಳೆ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬುಲೆನ್ಸ್ಗಳನ್ನು ಹಾಗೂ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.</p>.<p class="Subhead">ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ, ಜಂಟಿ ಪೊಲೀಸ್ ಕಮಿಷನರ್ ಡಾ. ಬಿ.ಆರ್. ರವಿಕಾಂತೇಗೌಡ ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ ಕಾರಣದಿಂದ ಈ ಬಾರಿ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು. ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ಈ ಬಾರಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.</p>.<p>‘ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ಮಂಗಳವಾರ ಬೆಳಿಗ್ಗೆ 9ಕ್ಕೆ ರಾಜ್ಯಪಾಲರು ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ. ಗೌರವ ರಕ್ಷೆ ಸ್ವೀಕರಿಸಿ, ರಾಜ್ಯದ ಜನರಿಗೆ 71ನೇ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p class="Subhead"><strong>21 ತುಕಡಿಗಳಿಂದ ಪಥಸಂಚಲನ</strong></p>.<p>ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಂಚಾರ ಪೊಲೀಸರು, ಅಗ್ನಿಶಾಮಕ ದಳ, ಶ್ವಾನದಳ ಮತ್ತು ಬ್ಯಾಂಡ್ ಸೇರಿದಂತೆ ಒಟ್ಟು 21 ತುಕಡಿಗಳಲ್ಲಿ 750 ಮಂದಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p class="Subhead">500 ಆಸನ ವ್ಯವಸ್ಥೆ: ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು <strong>ಎಂದು ಸೂಚಿಸಲಾಗಿದೆ. ಕಾರ್ಯಕ್ರಮದ ನೇರಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ.</strong></p>.<p class="Subhead"><strong>ವಿಪತ್ತು ನಿರ್ವಹಣೆಗೆ ಸಜ್ಜು</strong></p>.<p class="Subhead">ಕಾರ್ಯಕ್ರಮದ ವೇಳೆ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬುಲೆನ್ಸ್ಗಳನ್ನು ಹಾಗೂ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.</p>.<p class="Subhead">ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ, ಜಂಟಿ ಪೊಲೀಸ್ ಕಮಿಷನರ್ ಡಾ. ಬಿ.ಆರ್. ರವಿಕಾಂತೇಗೌಡ ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>