ಥರ್ಡ್ ಪಾರ್ಟಿ ವಿಮೆ ಮಾಡಿಸುವುದನ್ನು ಕಡ್ಡಾಯಗೊಳಿಸಿರುವುದು, ವಾಹನಗಳ ಪರವಾನಗಿ, ಅಂತರರಾಜ್ಯ ಪರವಾನಗಿ ವಿಷಯದಲ್ಲಿ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳುವುದು, ರಾಜ್ಯ ಸಾರಿಗೆ ನೀತಿ ನಿರೂಪಣೆಯಲ್ಲಿ ಕೇಂದ್ರ ಸರ್ಕಾರವೇ ಪ್ರಧಾನ ಪಾತ್ರ ವಹಿಸುವುದು – ಈ ನಿಯಮಗಳನ್ನು ಕೈಬಿಡಬೇಕು ಎನ್ನುವುದು ಅವರ ಒತ್ತಾಯವಾಗಿತ್ತು.