<p><strong>ಬೆಂಗಳೂರು</strong>: ಚಿಲ್ಲರೆ ಮಾರಾಟ ಮಳಿಗೆಗಳ ಬಳಿ ಜನಸಂದಣಿ ಉಂಟಾಗುವುದನ್ನು ತಡೆಯಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿಯು ಇಂತಹ ಮಳಿಗೆಗಳ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿಲ್ಲರೆ ಮಾರಾಟ ಮಳಿಗೆಗಳು ಉತ್ಪನ್ನಗಳ ಮಾರಾಟ ಉತ್ತೇಜನಕ್ಕಾಗಿ ವಿಶೇಷ ಕೊಡುಗೆಗಳನ್ನು ನೀಡುವಂತಿಲ್ಲ. ಮಾರಾಟ ಮೇಳಗಳನ್ನು ಹಮ್ಮಿಕೊಳ್ಳುವಂತಿಲ್ಲ.</p>.<p>ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಅದರ ಪ್ರಮುಖ ಅಂಶಗಳು ಇಂತಿವೆ.</p>.<p>* ಮಳಿಗೆಗಳ ಬಳಿ ಜನಜಂಗುಳಿ ಸೇರಲು ಕಾರಣವಂತಹ ‘ಕೊಡುಗೆ’ಗಳನ್ನು ನೀಡಬಾರದು. </p>.<p>* ನಿರ್ದಿಷ್ಟ ಕಾಲಮಿತಿಯಯೊಳಗೆ ಬಳಸಬಹುದಾದ ಟೋಕನ್ಗಳನ್ನು ನೀಡುವ ಮೂಲಕ ಮಳಿಗೆಯಲ್ಲಿ ಗ್ರಾಹಕರ ದಟ್ಟಣೆ ಉಂಟಾಗುವುದನ್ನು ತಡೆಯಬಹುದು. ನಿರ್ಬಂಧದ ಆದೇಶ ಜಾರಿಯಲ್ಲಿದ್ದರೂ ಜನರಿಗೆ ಅವಶ್ಯಕ ಸಾಮಗ್ರಿ ಸಿಗಬೇಕು ಎಂಬ ಕಾರಣಕ್ಕೆ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.</p>.<p>* ಗ್ರಾಹಕರ ಬಳಕೆಗಾಗಿ ಸ್ಯಾನಿಟೈಸರ್ಗಳನ್ನು ಮಳಿಗೆಗಳಲ್ಲಿ ಒದಗಿಸಬೇಕು.</p>.<p>* ಮಳಿಗೆಯಲ್ಲಿ ಗ್ರಾಹಕರು ಕೈಯಿಂದ ಮುಟ್ಟುವಂತಹ ರೇಲಿಂಗ್, ಬಾಗಿಲ ಕೈಹಿಡಿ, ನೆಲ, ಬಿಲ್ಲಿಂಗ್ ಕೌಂಟರ್ಗಳ ಮೇಲ್ಮೈ ಮುಂತಾದ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್ನಿಂದ ಅಥವಾ ಬ್ಲೀಚಿಂಗ್ ಪೌಡರ್ನಿಂದ ತಯಾರಿಸಿದ ದ್ರಾವಣದಿಂದ ಆಗಾಗ ಸ್ವಚ್ಛಗೊಳಿಸಬೇಕು.</p>.<p>* ಸಿಬ್ಬಂದಿಯೂ ವೈಯಕ್ತಿಕ ಸ್ವಚ್ಛತೆಗೆ ಗಮನ ಹರಿಸಬೇಕು. ಸಿಬ್ಬಂದಿಗಳೆಲ್ಲರಿಗೂ ಕೋವಿಡ್ ಲಸಿಕೆ ನೀಡಬೇಕು. ಸೋಂಕಿನ ಲಕ್ಷಣಗಳಿರುವ ಹಾಗೂ ಉಸಿರಾಟದ ಸಮಸ್ಯೆ ಹೊಂದಿರುವ ಸಿಬ್ಬಂದಿಗೆ ಅಸೌಖ್ಯದ ರಜೆ ಮಂಜೂರು ಮಾಡಿ ಚಿಕಿತ್ಸೆ ಪಡೆಯುವಂತೆ ಸೂಚಿಸಬೇಕು.</p>.<p>* ಗ್ರಾಹಕರು ಉತ್ಪನ್ನಗಳನ್ನು ಮುಟ್ಟುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಉತ್ಪನ್ನ ತೆಗೆದುಕೊಡಲು ಸಿಬ್ಬಂದಿಯನ್ನು ನಿಯೋಜಿಸಬೇಕು.</p>.<p>* ಬಿಲ್ಲಿಂಗ್ ಕೌಂಟರ್ನಲ್ಲಿ ಗ್ರಾಹಕರ ದಟ್ಟಣೆ ಕಡಿಮೆಗೊಳಿಸಲು, ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಬೇಕು. ವಾರಾಂತ್ಯದಲ್ಲಿ ಹೆಚ್ಚುವರಿ ಕೌಂಟರ್ಗಳನ್ನು ವ್ಯವಸ್ಥೆ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿಲ್ಲರೆ ಮಾರಾಟ ಮಳಿಗೆಗಳ ಬಳಿ ಜನಸಂದಣಿ ಉಂಟಾಗುವುದನ್ನು ತಡೆಯಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿಯು ಇಂತಹ ಮಳಿಗೆಗಳ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿಲ್ಲರೆ ಮಾರಾಟ ಮಳಿಗೆಗಳು ಉತ್ಪನ್ನಗಳ ಮಾರಾಟ ಉತ್ತೇಜನಕ್ಕಾಗಿ ವಿಶೇಷ ಕೊಡುಗೆಗಳನ್ನು ನೀಡುವಂತಿಲ್ಲ. ಮಾರಾಟ ಮೇಳಗಳನ್ನು ಹಮ್ಮಿಕೊಳ್ಳುವಂತಿಲ್ಲ.</p>.<p>ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಅದರ ಪ್ರಮುಖ ಅಂಶಗಳು ಇಂತಿವೆ.</p>.<p>* ಮಳಿಗೆಗಳ ಬಳಿ ಜನಜಂಗುಳಿ ಸೇರಲು ಕಾರಣವಂತಹ ‘ಕೊಡುಗೆ’ಗಳನ್ನು ನೀಡಬಾರದು. </p>.<p>* ನಿರ್ದಿಷ್ಟ ಕಾಲಮಿತಿಯಯೊಳಗೆ ಬಳಸಬಹುದಾದ ಟೋಕನ್ಗಳನ್ನು ನೀಡುವ ಮೂಲಕ ಮಳಿಗೆಯಲ್ಲಿ ಗ್ರಾಹಕರ ದಟ್ಟಣೆ ಉಂಟಾಗುವುದನ್ನು ತಡೆಯಬಹುದು. ನಿರ್ಬಂಧದ ಆದೇಶ ಜಾರಿಯಲ್ಲಿದ್ದರೂ ಜನರಿಗೆ ಅವಶ್ಯಕ ಸಾಮಗ್ರಿ ಸಿಗಬೇಕು ಎಂಬ ಕಾರಣಕ್ಕೆ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.</p>.<p>* ಗ್ರಾಹಕರ ಬಳಕೆಗಾಗಿ ಸ್ಯಾನಿಟೈಸರ್ಗಳನ್ನು ಮಳಿಗೆಗಳಲ್ಲಿ ಒದಗಿಸಬೇಕು.</p>.<p>* ಮಳಿಗೆಯಲ್ಲಿ ಗ್ರಾಹಕರು ಕೈಯಿಂದ ಮುಟ್ಟುವಂತಹ ರೇಲಿಂಗ್, ಬಾಗಿಲ ಕೈಹಿಡಿ, ನೆಲ, ಬಿಲ್ಲಿಂಗ್ ಕೌಂಟರ್ಗಳ ಮೇಲ್ಮೈ ಮುಂತಾದ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್ನಿಂದ ಅಥವಾ ಬ್ಲೀಚಿಂಗ್ ಪೌಡರ್ನಿಂದ ತಯಾರಿಸಿದ ದ್ರಾವಣದಿಂದ ಆಗಾಗ ಸ್ವಚ್ಛಗೊಳಿಸಬೇಕು.</p>.<p>* ಸಿಬ್ಬಂದಿಯೂ ವೈಯಕ್ತಿಕ ಸ್ವಚ್ಛತೆಗೆ ಗಮನ ಹರಿಸಬೇಕು. ಸಿಬ್ಬಂದಿಗಳೆಲ್ಲರಿಗೂ ಕೋವಿಡ್ ಲಸಿಕೆ ನೀಡಬೇಕು. ಸೋಂಕಿನ ಲಕ್ಷಣಗಳಿರುವ ಹಾಗೂ ಉಸಿರಾಟದ ಸಮಸ್ಯೆ ಹೊಂದಿರುವ ಸಿಬ್ಬಂದಿಗೆ ಅಸೌಖ್ಯದ ರಜೆ ಮಂಜೂರು ಮಾಡಿ ಚಿಕಿತ್ಸೆ ಪಡೆಯುವಂತೆ ಸೂಚಿಸಬೇಕು.</p>.<p>* ಗ್ರಾಹಕರು ಉತ್ಪನ್ನಗಳನ್ನು ಮುಟ್ಟುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಉತ್ಪನ್ನ ತೆಗೆದುಕೊಡಲು ಸಿಬ್ಬಂದಿಯನ್ನು ನಿಯೋಜಿಸಬೇಕು.</p>.<p>* ಬಿಲ್ಲಿಂಗ್ ಕೌಂಟರ್ನಲ್ಲಿ ಗ್ರಾಹಕರ ದಟ್ಟಣೆ ಕಡಿಮೆಗೊಳಿಸಲು, ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಬೇಕು. ವಾರಾಂತ್ಯದಲ್ಲಿ ಹೆಚ್ಚುವರಿ ಕೌಂಟರ್ಗಳನ್ನು ವ್ಯವಸ್ಥೆ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>