<p><strong>ಬೆಂಗಳೂರು:</strong> ‘ಕೋವಿಡ್ ಕಾರಣ ಡಿಸೆಂಬರ್ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆನ್ಲೈನ್ ಮೂಲಕ ಪಾಲ್ಗೊಂಡ ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.</p>.<p>‘ಡಿಸೆಂಬರ್ ಚಳಿಗಾಲ ಆಗಿದ್ದು, ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ’ ಎಂದು ಸಚಿವರು ಹೇಳಿದರು.</p>.<p>‘ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ನಡೆಸಿ, ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಬಹುದು’ ಎಂದು ಸಚಿವರು ಸಭೆಗೆ ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ ಕಾರಣ ಡಿಸೆಂಬರ್ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆನ್ಲೈನ್ ಮೂಲಕ ಪಾಲ್ಗೊಂಡ ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.</p>.<p>‘ಡಿಸೆಂಬರ್ ಚಳಿಗಾಲ ಆಗಿದ್ದು, ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ’ ಎಂದು ಸಚಿವರು ಹೇಳಿದರು.</p>.<p>‘ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ನಡೆಸಿ, ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಬಹುದು’ ಎಂದು ಸಚಿವರು ಸಭೆಗೆ ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>