ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ದಿನಗಳಿಂದ ನೀರಿಲ್ಲ: ಪ್ರತಿಭಟನೆಗೆ ನಿರ್ಧಾರ

Last Updated 12 ಸೆಪ್ಟೆಂಬರ್ 2021, 19:21 IST
ಅಕ್ಷರ ಗಾತ್ರ

ಬೆಂಗಳೂರು: ಹನ್ನೊಂದು ದಿನಗಳಿಂದ ನೀರು ಪೂರೈಸದಿರುವುದರಿಂದ ಬೇಸತ್ತಿರುವ ವಿದ್ಯಾರಣ್ಯಪುರ ನಿವಾಸಿಗಳು ಇದೇ 13ರಂದು ( ಸೋಮವಾರ) ಬೆಳಿಗ್ಗೆ 11ಕ್ಕೆ ಜಲಮಂಡಳಿಯ ಸ್ಥಳೀಯ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

‘ವಿದ್ಯಾರಣ್ಯಪುರ ಭಾಗದಲ್ಲಿ ತಿಂಗಳಿನಿಂದಲೇ ನೀರಿನ ಅಭಾವ ಸೃಷ್ಟಿಯಾಗಿದೆ. ಅದರಲ್ಲಿಯೂ, 11 ದಿನಗಳಿಂದ ಒಂದು ಹನಿ ನೀರನ್ನೂ ಸರಬರಾಜು ಮಾಡಿಲ್ಲ. ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ, ಆದೀಶ್ವರ ಶೋ ರೂಂ ಬಳಿ ಇರುವ ವಿದ್ಯಾರಣ್ಯಪುರ ಜಲಮಂಡಳಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು’ ಎಂದು ವಿದ್ಯಾರಣ್ಯಪುರ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಆರ್. ಅಶ್ವತ್ಥ್ ತಿಳಿಸಿದರು.

‘ಜಿಕೆವಿಕೆ ಬಳಿಯ ಪಂಪಿಂಗ್‌ ಸ್ಟೇಷನ್‌ನಲ್ಲಿ ಯಂತ್ರ ಕೆಟ್ಟಿರುವುದರಿಂದ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 11 ದಿನಗಳಿಂದಲೂ ಇದೇ ಕಾರಣ ಹೇಳುತ್ತಿದ್ದಾರೆ. ಹಬ್ಬದ ಸಂದರ್ಭದಲ್ಲಿ ನೀರಿಲ್ಲದೆ ಪರಿತಪಿಸುವಂತಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಎನ್‌ಐಟಿ ಬಡಾವಣೆ, ಬಿಇಎಲ್‌ ಬಡಾವಣೆ, ಎಚ್‌ಎಂಟಿ ಬಡಾವಣೆ ಸೇರಿ ಹಲವು ಪ್ರದೇಶಗಳ ಸುಮಾರು 6 ಸಾವಿರ ಮನೆಗಳಿಗೆ ನೀರು ಪೂರೈಕೆಯಾಗುತ್ತಿಲ್ಲ. ಟ್ಯಾಂಕರ್‌ ನೀರು ತರಿಸಿಕೊಳ್ಳುತ್ತಿದ್ದೇವೆ. ಒಂದು ಟ್ಯಾಂಕರ್‌ಗೆ ₹500ರಿಂದ ₹700ವರೆಗೆ ಕೊಡಬೇಕಾಗಿದೆ’ ಎಂದು ಅವರು ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT