‘ವಿದ್ಯಾರಣ್ಯಪುರ ಭಾಗದಲ್ಲಿ ತಿಂಗಳಿನಿಂದಲೇ ನೀರಿನ ಅಭಾವ ಸೃಷ್ಟಿಯಾಗಿದೆ. ಅದರಲ್ಲಿಯೂ, 11 ದಿನಗಳಿಂದ ಒಂದು ಹನಿ ನೀರನ್ನೂ ಸರಬರಾಜು ಮಾಡಿಲ್ಲ. ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ, ಆದೀಶ್ವರ ಶೋ ರೂಂ ಬಳಿ ಇರುವ ವಿದ್ಯಾರಣ್ಯಪುರ ಜಲಮಂಡಳಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು’ ಎಂದು ವಿದ್ಯಾರಣ್ಯಪುರ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಆರ್. ಅಶ್ವತ್ಥ್ ತಿಳಿಸಿದರು.