ಮಂಗಳವಾರ ಇಲ್ಲಿ 10ಮಹಾನಗರ ಪಾಲಿಕೆಗಳ ಆಯುಕ್ತರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ರಾಜ್ಯದ ಯಾವುದೇ ಮಹಾನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಎದುರಾಗದು, ನದಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ.ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಪಾಲಿಕೆ ವ್ಯಾಪ್ತಿಸಹಿತ ಉಳಿದೆಡೆ ಪ್ರತಿದಿನ ನೀರು ಪೂರೈಸುವ ವಿಚಾರ ಇದೆ’ ಎಂದರು.