ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಸ್ವಾಯತ್ತ ಸಂಸ್ಥೆಗಳ ಬೋಧಕೇತರ ನೌಕರರ ಸಂಘವು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದೆ. ‘ಸರ್ಕಾರವು ತನ್ನ ನೌಕರರಿಗೆ ನೀಡಿದ ವಿವಿಧ ಸೌಲಭ್ಯಗಳನ್ನು ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ನೀಡುತ್ತಿಲ್ಲ. ಈಗಾಗಲೇ ಹಲವು ಬಾರಿ ಮನ leವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಕೋವಿಡ್ ಸಂದರ್ಭದಲ್ಲಿ ನಮ್ಮ ಸೇವೆಯನ್ನು ಮನಗಂಡು ಇನ್ನಾ ದರೂ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಸಂಘವು ಪತ್ರದಲ್ಲಿ ತಿಳಿಸಿದೆ.