<p><strong>ಬೆಂಗಳೂರು</strong>: ಭೀಮನ ಅಮಾವಾಸ್ಯೆ ಸೋಮವಾರ ಇದ್ದು, ಶ್ರಾವಣ ಮಾಸದ ಆರಂಭದ ಮುನ್ನಾದಿನವಾದ ಭಾನುವಾರ ಮಾಂಸ ವ್ಯಾಪಾರದ ಭರಾಟೆ ಜೋರಾಗಿತ್ತು.</p>.<p>ಸೋಮವಾರದಿಂದ ಶ್ರಾವಣ ಮಾಸ ಆರಂಭಗೊಳ್ಳುತ್ತಿದೆ. ಹಿಂದೂ ಸಂಪ್ರದಾಯ ಪಾಲಿಸುವ ಅನೇಕರು ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸುವುದಿಲ್ಲ. ಹಾಗಾಗಿ ನಗರದ ಮೈಸೂರು ರಸ್ತೆ, ಕೆ.ಆರ್.ಮಾರುಕಟ್ಟೆ, ಪಾಪಣ್ಣ ಮಟನ್ ಸ್ಟಾಲ್, ನಾಗರಬಾವಿ, ಮಲ್ಲೇಶ್ವರ, ಶಿವಾಜಿನಗರದ ಮಾಂಸದಂಗಡಿಗಳ ಮುಂದೆ ಜನ ಭಾನುವಾರ ಸಾಲುಗಟ್ಟಿ ನಿಂತಿದ್ದರು.</p>.<p>ಕೊರೊನಾ ನಿಯಂತ್ರಣಕ್ಕಾಗಿ ಪ್ರತಿ ಭಾನುವಾರ ಲಾಕ್ಡೌನ್ ನಿಯಮ ಜಾರಿಯಲ್ಲಿದೆ. ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಮಾಂಸದಂಗಡಿಗಳೂ ಇರುವುದರಿಂದ ಪ್ರತಿ ಭಾನುವಾರವೂ ಇವು ವಹಿವಾಟು ನಡೆಸಿದವು. ಆದರೆ, ಕಳೆದ ಭಾನುವಾರಕ್ಕೆ ಹೋಲಿಸಿದರೆ ಈ ಬಾರಿ ಮಾಂಸದಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚು ಇತ್ತು.</p>.<p>ಲಾಕ್ಡೌನ್ನಿಂದ ಮಾಂಸದಂಗಡಿಗಳು ಮಧ್ಯಾಹ್ನ 12ರವರೆಗೆ ಮಾತ್ರ ತೆರೆದಿದ್ದವು. ಹೀಗಾಗಿ ನಗರದ ಎಲ್ಲ ಬಡಾವಣೆಗಳಲ್ಲಿ ಬೆಳಗ್ಗೆಯಿಂದಲೇ ಮಾಂಸ ಖರೀದಿಗೆ ಜನ ಸಾಲುಗುಟ್ಟಿ ನಿಂತಿದ್ದರು. ಖರೀದಿ ವೇಳೆ ಕೆಲ ಅಂಗಡಿಗಳಲ್ಲಿ ಜನ ಅಂತರ ಕಾಯ್ದುಕೊಳ್ಳುವುದನ್ನು ಮರೆತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭೀಮನ ಅಮಾವಾಸ್ಯೆ ಸೋಮವಾರ ಇದ್ದು, ಶ್ರಾವಣ ಮಾಸದ ಆರಂಭದ ಮುನ್ನಾದಿನವಾದ ಭಾನುವಾರ ಮಾಂಸ ವ್ಯಾಪಾರದ ಭರಾಟೆ ಜೋರಾಗಿತ್ತು.</p>.<p>ಸೋಮವಾರದಿಂದ ಶ್ರಾವಣ ಮಾಸ ಆರಂಭಗೊಳ್ಳುತ್ತಿದೆ. ಹಿಂದೂ ಸಂಪ್ರದಾಯ ಪಾಲಿಸುವ ಅನೇಕರು ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸುವುದಿಲ್ಲ. ಹಾಗಾಗಿ ನಗರದ ಮೈಸೂರು ರಸ್ತೆ, ಕೆ.ಆರ್.ಮಾರುಕಟ್ಟೆ, ಪಾಪಣ್ಣ ಮಟನ್ ಸ್ಟಾಲ್, ನಾಗರಬಾವಿ, ಮಲ್ಲೇಶ್ವರ, ಶಿವಾಜಿನಗರದ ಮಾಂಸದಂಗಡಿಗಳ ಮುಂದೆ ಜನ ಭಾನುವಾರ ಸಾಲುಗಟ್ಟಿ ನಿಂತಿದ್ದರು.</p>.<p>ಕೊರೊನಾ ನಿಯಂತ್ರಣಕ್ಕಾಗಿ ಪ್ರತಿ ಭಾನುವಾರ ಲಾಕ್ಡೌನ್ ನಿಯಮ ಜಾರಿಯಲ್ಲಿದೆ. ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಮಾಂಸದಂಗಡಿಗಳೂ ಇರುವುದರಿಂದ ಪ್ರತಿ ಭಾನುವಾರವೂ ಇವು ವಹಿವಾಟು ನಡೆಸಿದವು. ಆದರೆ, ಕಳೆದ ಭಾನುವಾರಕ್ಕೆ ಹೋಲಿಸಿದರೆ ಈ ಬಾರಿ ಮಾಂಸದಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚು ಇತ್ತು.</p>.<p>ಲಾಕ್ಡೌನ್ನಿಂದ ಮಾಂಸದಂಗಡಿಗಳು ಮಧ್ಯಾಹ್ನ 12ರವರೆಗೆ ಮಾತ್ರ ತೆರೆದಿದ್ದವು. ಹೀಗಾಗಿ ನಗರದ ಎಲ್ಲ ಬಡಾವಣೆಗಳಲ್ಲಿ ಬೆಳಗ್ಗೆಯಿಂದಲೇ ಮಾಂಸ ಖರೀದಿಗೆ ಜನ ಸಾಲುಗುಟ್ಟಿ ನಿಂತಿದ್ದರು. ಖರೀದಿ ವೇಳೆ ಕೆಲ ಅಂಗಡಿಗಳಲ್ಲಿ ಜನ ಅಂತರ ಕಾಯ್ದುಕೊಳ್ಳುವುದನ್ನು ಮರೆತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>