<p><strong>ನೆಲಮಂಗಲ:</strong> ಅಭಿವೃದ್ಧಿಯ ಹೆಸರಲ್ಲಿ ಬೆಂಗಳೂರು ಗ್ರಾಮಾಂತರ’ ಹೆಸರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಬದಲಿಸುವುದನ್ನು ವಿರೋಧಿಸಿ ‘ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಳಿಸಿ ಹೋರಾಟ ಸಮಿತಿಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಕಾರರು ‘ಉಳಿಸಿ ಉಳಿಸಿ ಗ್ರಾಮಾಂತರ ಉಳಿಸಿ’ ಎಂದು ಘೋಷಣೆಗಳನ್ನು ಕೂಗುತ್ತ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.</p>.<p>ಪ್ರತಿಭಟನಕಾರರನ್ನು ಉದ್ದೆಶಿಸಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ‘ಪಟ್ಟಭದ್ರರು ತಮ್ಮ ಬೇನಾಮಿ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳಲು ಜಿಲ್ಲೆ ಹೆಸರು ಬದಲಿಸಲು ಹೊರಟಿದ್ದಾರೆ. ಅಭಿವೃದ್ಧಿ ಹೆಸರಲ್ಲಿ ಅನಗತ್ಯವಾಗಿ ಜಿಲ್ಲೆಯ ಹೆಸರು ಬದಲಿಸಿಕೂಡದು’ ಎಂದು ಒತ್ತಾಯಿಸಿದರು. </p>.<p>ಉಪಾಧ್ಯಕ್ಷ ಬಿ.ನರಸಿಂಹಯ್ಯ ಮಾತನಾಡಿ, ‘ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಬದಲಿಸುವುದರಿಂದ ಶೈಕ್ಷಣಿಕ ಮೀಸಲಾತಿ ಕಳೆದುಕೊಳ್ಳಬೇಕಾಗುತ್ತದೆ. ಎಲ್ಲ ದಾಖಲೆಗಳ ತಿದ್ದುಪಡಿಗೆ ಸಾರ್ವಜನಿಕರು ಅಲೆದಾಡ ಬೇಕಾಗುತ್ತದೆ. ಭ್ರಷ್ಟಾಚಾರಕ್ಕೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ’ ಎಂದು ದೂರಿದರು.</p>.<p>‘ಹೆಸರು ಬದಲಿಸುವ ಕುರಿತು ಯಾವುದೇ ಪ್ರಕಟಣೆ ನೀಡಿಲ್ಲ. ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿಲ್ಲ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಸಮಿತಿಯ ಮುಖಂಡರಾದ ಬಿ.ಎಂ.ಗಂಗಬೈಲಪ್ಪ, ಎಚ್.ಜಿ.ರಾಜು, ಎನ್.ಆರ್.ನಾಗರಾಜು, ಎ.ಕೇಶವಮೂರ್ತಿ, ಆನಂದ ಮೌರ್ಯ, ಡಿ.ಸಿದ್ದರಾಜು, ರಂಗಸ್ವಾಮಿ, ವೆಂಕಟೇಶ್ ಚೌಥಾಯಿ ಇತರರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಅಭಿವೃದ್ಧಿಯ ಹೆಸರಲ್ಲಿ ಬೆಂಗಳೂರು ಗ್ರಾಮಾಂತರ’ ಹೆಸರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಬದಲಿಸುವುದನ್ನು ವಿರೋಧಿಸಿ ‘ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಳಿಸಿ ಹೋರಾಟ ಸಮಿತಿಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಕಾರರು ‘ಉಳಿಸಿ ಉಳಿಸಿ ಗ್ರಾಮಾಂತರ ಉಳಿಸಿ’ ಎಂದು ಘೋಷಣೆಗಳನ್ನು ಕೂಗುತ್ತ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.</p>.<p>ಪ್ರತಿಭಟನಕಾರರನ್ನು ಉದ್ದೆಶಿಸಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ‘ಪಟ್ಟಭದ್ರರು ತಮ್ಮ ಬೇನಾಮಿ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳಲು ಜಿಲ್ಲೆ ಹೆಸರು ಬದಲಿಸಲು ಹೊರಟಿದ್ದಾರೆ. ಅಭಿವೃದ್ಧಿ ಹೆಸರಲ್ಲಿ ಅನಗತ್ಯವಾಗಿ ಜಿಲ್ಲೆಯ ಹೆಸರು ಬದಲಿಸಿಕೂಡದು’ ಎಂದು ಒತ್ತಾಯಿಸಿದರು. </p>.<p>ಉಪಾಧ್ಯಕ್ಷ ಬಿ.ನರಸಿಂಹಯ್ಯ ಮಾತನಾಡಿ, ‘ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಬದಲಿಸುವುದರಿಂದ ಶೈಕ್ಷಣಿಕ ಮೀಸಲಾತಿ ಕಳೆದುಕೊಳ್ಳಬೇಕಾಗುತ್ತದೆ. ಎಲ್ಲ ದಾಖಲೆಗಳ ತಿದ್ದುಪಡಿಗೆ ಸಾರ್ವಜನಿಕರು ಅಲೆದಾಡ ಬೇಕಾಗುತ್ತದೆ. ಭ್ರಷ್ಟಾಚಾರಕ್ಕೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ’ ಎಂದು ದೂರಿದರು.</p>.<p>‘ಹೆಸರು ಬದಲಿಸುವ ಕುರಿತು ಯಾವುದೇ ಪ್ರಕಟಣೆ ನೀಡಿಲ್ಲ. ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿಲ್ಲ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಸಮಿತಿಯ ಮುಖಂಡರಾದ ಬಿ.ಎಂ.ಗಂಗಬೈಲಪ್ಪ, ಎಚ್.ಜಿ.ರಾಜು, ಎನ್.ಆರ್.ನಾಗರಾಜು, ಎ.ಕೇಶವಮೂರ್ತಿ, ಆನಂದ ಮೌರ್ಯ, ಡಿ.ಸಿದ್ದರಾಜು, ರಂಗಸ್ವಾಮಿ, ವೆಂಕಟೇಶ್ ಚೌಥಾಯಿ ಇತರರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>