ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದಿದ್ದರೆ ಬೆಂಗಳೂರಿನಲ್ಲಿ ₹1,000 ದಂಡ: ಸಚಿವ ಡಾ.ಕೆ.ಸುಧಾಕರ್

ಸಭೆ ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನ‌ ಸೇರಿದರೆ ಆಯೋಜಕರ‌ ವಿರುದ್ಧ ಶಿಸ್ತು ಕ್ರಮ
Last Updated 30 ಸೆಪ್ಟೆಂಬರ್ 2020, 16:09 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ ₹1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ₹500 ಆಗಿ ಹೆಚ್ಚಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಅವರು, ‘ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರ ಬೀಳಲಿದೆ. ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ದಂಡ ವಿಧಿಸಲಾಗುವುದು’ ಎಂದರು.

‘ಇತ್ತೀಚಿನ‌ ದಿನಗಳಲ್ಲಿ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ ₹200 ದಂಡವನ್ನು ಹೆಚ್ಚಿಸಲಾಗಿದೆ. ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲು ಮಾಡಲಾಗುವುದು’ ಎಂದರು.

‘ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ‌ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು. ಮಾರುಕಟ್ಟೆ, ಮಾಲ್, ಇತರೆ ಸಾರ್ವಜನಿಕ ಸ್ಥಳದಲ್ಲಿ 5ಕ್ಕೂ ಹೆಚ್ಚು ಜನ ಗುಂಪುಗೂಡಿ‌ ನಿಲ್ಲುವಂತಿಲ್ಲ. ಇವರ ನಡುವೆ ಸಹ ಕನಿಷ್ಠ 6 ಅಡಿ ಅಂತರವಿರಬೇಕು. ಇಲ್ಲವಾದರೆ ಆ ಸಂಸ್ಥೆ ಮಾಲೀಕರಿಗೆ ದಂಡ ವಿಧಿಸಲಾಗುವುದು’ ಎಂದೂ ಹೇಳಿದರು

‘ಕೊರೊನಾ ಜಾಗೃತಿ ಸಂಬಂಧ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಯೋಜನೆ ರಚಿಸಲಾಗಿದೆ. ರಾಜಕಾರಣಿಗಳು, ಕ್ರೀಡೆ, ಸಿನಿ ತಾರೆಯರು, ಧಾರ್ಮಿಕ ಗುರುಗಳ ಮೂಲಕ ಮಾಸ್ಕ್‌ ಬಗ್ಗೆ ಕೋರೋನ ನಿಯಂತ್ರಣ ಮಾಡುವ ಸಣ್ಣ ತುಣುಕುಗಳನ್ನು ವಿಡಿಯೊ ಮೂಲಕ ತಲುಪಿಸಲು ಕ್ರಮ. ಜೊತೆಗೆ ಸ್ವಯಂ ಸೇವಾ ಸಂಘಟಕರು, ಲಯನ್ಸ್‌ ಕ್ಲಬ್‌ ರೋಟರಿ‌ಕ್ಲಬ್‌, ವೆಲ್‌ಫೇರ್ ಅಸೋಸಿಯೇಷನ್ ಎಲ್ಲರೂ ಸರಕಾರದೊಂದಿಗೆ ಕೈ ಜೋಡಿಸಿದರೆ ನಿರ್ವಹಣೆಗೆ ಹೆಚ್ಚು ಪ್ರಬಲವಾಗಿ ಮಾಡಬಹುದು’ ಎಂದರು.

‘ರಾಜ್ಯದಲ್ಲಿ ಒಟ್ಟು 15 ಜಿಲ್ಲೆಗಳಲ್ಲಿ ಶೇ 1ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುತ್ತಿದೆ. ಈ ಪೈಕಿ, ಮೈಸೂರು, ಹಾಸನ, ದಕ್ಷಿಣ ಕನ್ನಡ, ತುಮಕೂರು ಶಿವಮೊಗ್ಗ ಮತ್ತು ಕೊಪ್ಪಳ ಏಳು ಜಿಲ್ಲಾಧಿಕಾರಿ, ಡಿಎಚ್‌ಒ ಅಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿ ಪಾಸಿಟಿವ್ ಪ್ರಮಾಣವನ್ನು ಕಡಿಮೆ‌ ಮಾಡಲು ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ನೀಡಿದ್ದೇವೆ. ಮುಂದಿನ‌ ದಿನಗಳಲ್ಲಿ ಉಳಿದ‌ ಜಿಲ್ಲೆಗಳ ಜೊತೆ‌ ಸಭೆ ನಡೆಸಲಾಗುವುದು’ ಎಂದರು. ಶೇ 17 ರಷ್ಟು ಪಾಸಿಟಿವ್ ಪ್ರಮಾಣ ಮೈಸೂರಿನಲ್ಲಿದ್ದು, ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.

‘ಸಾರಿಗೆ ವ್ಯವಸ್ಥೆಯಾದ ಬಸ್‌ಗಳಲ್ಲಿ ಶೇ 50 ರಷ್ಟು ಮಾತ್ರ ಪ್ರಯಾಣಿಸಲು ಅವಕಾಶವಿದೆ., ಮಾಸ್ಕ್‌ ಇಲ್ಲದವರನ್ನು ಬಸ್‌ ಒಳಗೆ ಪ್ರವೇಶ ನೀಡದಂತೆ ನಿರ್ವಾಹಕರಿಗೆಗಳಿಗೆ ಸೂಚಿಸಲಾಗುವುದು ಎಲ್ಲಾ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶ ವಿರುವುದಿಲ್ಲ.‌ ಇದನ್ನು ಕಟ್ಟುನಿಟ್ಟಾಗಿ ಪಾಲಸುವಂತೆ ಸೂಚನೆ ನೀಡಲಾಗುವುದು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT