‘ಕೇಂದ್ರ ಸರ್ಕಾರವು ಹಳೇ ನೋಟು ರದ್ದು ಮಾಡಿದ್ದರಿಂದ ಬಡವರು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ದೇಶದಾದ್ಯಂತ ನೂರಾರು ಮಂದಿ, ಹಣಕ್ಕಾಗಿ ಎಟಿಎಂ, ಬ್ಯಾಂಕ್ ಮುಂದೆ ನಿಂತು ಅಸ್ವಸ್ಥಗೊಂಡು ಸಾಯುವಂತಾಯಿತು. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಕೇಂದ್ರ ಸರ್ಕಾರ ನೋಟು ರದ್ದು ಮಾಡಿದ್ದೇ ಇದಕ್ಕೆಲ್ಲ ಕಾರಣ’ ಎಂದು ಬಸನಗೌಡ ಬಾದರ್ಲಿ ತಿಳಿಸಿದರು.