ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸುಧನ್ವ ಬಂಡೋಲ್ಕರ್ ಮತ್ತು ಇತರ 13 ಅಭ್ಯರ್ಥಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತಂತ್ರಾಂಶವನ್ನು ದುರ್ಬಳಕೆ ಮಾಡಿಕೊಂಡು ಆಯ್ದ ಅಭ್ಯರ್ಥಿಗಳ ಅಂಕಗಳನ್ನು ತಿರುಚಲಾಗಿದೆ. ಸಾಫ್ಟ್ವೇರ್ ಮತ್ತು ಮೌಲ್ಯಮಾಪನದ ದತ್ತಾಂಶವನ್ನು ಸಂರಕ್ಷಿಸಿಡಲು ನಿರ್ದೇಶನ ನೀಡಬೇಕು. ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ ಟಿಸಿಎಸ್ ಕಂಪನಿಯನ್ನೂ ಪ್ರತಿವಾದಿಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.