<p><strong>ಬೆಂಗಳೂರು:</strong> ಕಲಾವಿದರ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರಿಗೆ ಇಲಾಖೆ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ನೋಟಿಸ್ ನೀಡಿದ್ದಾರೆ.</p>.<p>ಕಲಾವಿದರು ತಮ್ಮನ್ನು ಭೇಟಿ ಮಾಡುವ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಲಾವಿದ ಜೋಗಿಲ ಸಿದ್ಧರಾಜು ಅವರು ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿ ಉಪಯೋಜನೆಯ ಲೆಕ್ಕ ಶೀರ್ಷಿಕೆಯಡಿ ಧನಸಹಾಯ ಯೋಜನೆ ಮತ್ತು ಪ್ರಾಯೋಜನೆಗೆ ಹಂಚಿಕೆ ಮಾಡಿ, ಲಭ್ಯವಿರುವ ₹1.59 ಕೋಟಿಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬ್ಯಾಂಕ್ ಖಾತೆಯಲ್ಲಿ ಕಾಯ್ದಿರಿಸಲಾಗಿದೆ. ಈ ಅನುದಾನವನ್ನು ಪ್ರಾಯೋಜನೆಗೆ ಬಳಸಲು ಅನುಮತಿ ನೀಡಲಾಗಿದ್ದರೂ ಬಳಕೆ ಮಾಡದಿರುವ ಬಗ್ಗೆ ಪಶ್ನಿಸಿದ್ದಾರೆ. </p>.<p>2025–26ನೇ ಸಾಲಿಗೆ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ₹ 2.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಲ್ಲಿ ಅನುಷ್ಠಾನ ಮಾಡಲಾದ ಯೋಜನೆ ಮತ್ತು ಕಾರ್ಯಕ್ರಮಗಳ ವಿವರ ಸಲ್ಲಿಸುವಂತೆ ತಿಳಿಸಿದ್ದಾರೆ. </p>.<h2>ಅನುದಾನ ಬಿಡುಗಡೆ</h2>.<p> ಪರಿಶಿಷ್ಟ ಜಾತಿ ಉಪಯೋಜನೆಯಡಿ 2022–23 2023–24 ಹಾಗೂ 2024–25ನೇ ಸಾಲಿಗೆ ಕಲಾ ತಂಡಗಳಿಗೆ ಬಾಕಿ ಇರುವ ಗೌರವ ಸಂಭಾವನೆ ಪಾವತಿಗೆ ಸಂಬಂಧಿಸಿದಂತೆ ₹ 1.29 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಆದೇಶ ಹೊರಡಿಸಿದ್ದಾರೆ. ಪರಿಶಿಷ್ಟ ಪಂಗಡ ಉಪಯೋಜನೆಯಡಿಯೂ ₹ 40.10 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲಾವಿದರ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರಿಗೆ ಇಲಾಖೆ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ನೋಟಿಸ್ ನೀಡಿದ್ದಾರೆ.</p>.<p>ಕಲಾವಿದರು ತಮ್ಮನ್ನು ಭೇಟಿ ಮಾಡುವ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಲಾವಿದ ಜೋಗಿಲ ಸಿದ್ಧರಾಜು ಅವರು ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿ ಉಪಯೋಜನೆಯ ಲೆಕ್ಕ ಶೀರ್ಷಿಕೆಯಡಿ ಧನಸಹಾಯ ಯೋಜನೆ ಮತ್ತು ಪ್ರಾಯೋಜನೆಗೆ ಹಂಚಿಕೆ ಮಾಡಿ, ಲಭ್ಯವಿರುವ ₹1.59 ಕೋಟಿಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬ್ಯಾಂಕ್ ಖಾತೆಯಲ್ಲಿ ಕಾಯ್ದಿರಿಸಲಾಗಿದೆ. ಈ ಅನುದಾನವನ್ನು ಪ್ರಾಯೋಜನೆಗೆ ಬಳಸಲು ಅನುಮತಿ ನೀಡಲಾಗಿದ್ದರೂ ಬಳಕೆ ಮಾಡದಿರುವ ಬಗ್ಗೆ ಪಶ್ನಿಸಿದ್ದಾರೆ. </p>.<p>2025–26ನೇ ಸಾಲಿಗೆ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ₹ 2.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಲ್ಲಿ ಅನುಷ್ಠಾನ ಮಾಡಲಾದ ಯೋಜನೆ ಮತ್ತು ಕಾರ್ಯಕ್ರಮಗಳ ವಿವರ ಸಲ್ಲಿಸುವಂತೆ ತಿಳಿಸಿದ್ದಾರೆ. </p>.<h2>ಅನುದಾನ ಬಿಡುಗಡೆ</h2>.<p> ಪರಿಶಿಷ್ಟ ಜಾತಿ ಉಪಯೋಜನೆಯಡಿ 2022–23 2023–24 ಹಾಗೂ 2024–25ನೇ ಸಾಲಿಗೆ ಕಲಾ ತಂಡಗಳಿಗೆ ಬಾಕಿ ಇರುವ ಗೌರವ ಸಂಭಾವನೆ ಪಾವತಿಗೆ ಸಂಬಂಧಿಸಿದಂತೆ ₹ 1.29 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಆದೇಶ ಹೊರಡಿಸಿದ್ದಾರೆ. ಪರಿಶಿಷ್ಟ ಪಂಗಡ ಉಪಯೋಜನೆಯಡಿಯೂ ₹ 40.10 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>