‘ಸರ್ಕಾರ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಉತ್ತೀರ್ಣ ಮಾಡಬೇಕು ಎಂದು ಸರ್ಕಾರದ ಆದೇಶವಿದೆ. ಆದರೂ, ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿ ಪರೀಕ್ಷೆ ನಡೆಸಿರುವುದು ಗಮನಕ್ಕೆ ಬಂದಿದೆ. ಶಾಲೆಗೆ ನೋಟಿಸ್ ನೀಡಲಾಗಿದೆಯಲ್ಲದೆ ಈ ಕುರಿತು ವರದಿ ನೀಡುವಂತೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಬೆಂಗಳೂರು ದಕ್ಷಿಣ ಡಿಡಿಪಿಐ ಅಶ್ವತ್ಥ್ ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.