ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಕೊರೊನಾ ಸೋಂಕಿತ ಮೃತರ ಅಂತ್ಯಕ್ರಿಯೆಯನ್ನು ರಾಜ್ಯದ ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ನಡೆಸಬೇಕು. ಸಿಬ್ಬಂದಿ ಮುಖಗವಸು, ಕೈಗವಸು, ಪಿಪಿಇ ಕಿಟ್ ಧರಿಸಬೇಕು. ಅಂತ್ಯಕ್ರಿಯೆ ನಡೆದ ಬಳಿಕ ಸುರಕ್ಷತಾ ಸಾಧನಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ.