ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಪಿಎಂಇ (ಯೋಜನೆ, ಉಸ್ತುವಾರಿ ಮತ್ತು ಮೌಲ್ಯಮಾಪನ) ಮಂಡಳಿ ಸದಸ್ಯ ಕೆ. ಮಹದೇವ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಕುಲಪತಿ ವಿದ್ಯಾಶಂಕರ್ ಸೇರಿದಂತೆ ನಾಲ್ವರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.