ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ವಿ.ಗಿರೀಶ್ ಕುಮಾರ್, ‘ಕೊಳ್ಳೇಗಾಲದ ರಾಮಾಪುರ ಪೊಲೀಸ್ ಠಾಣೆಯ ಮೇಲೆ 1992ರ ಮೇ 20ರಂದು ಕಾಡುಗಳ್ಳ ವೀರಪ್ಪನ್ ದಾಳಿ ನಡೆಸಿದ ಸಂದರ್ಭದಲ್ಲಿ ಕಾನ್ಸ್ಟೇಬಲ್ ರಾಚಪ್ಪ ಸೇರಿದಂತೆ ಐವರು ಪೊಲೀಸರು ಮೃತಪಟ್ಟಿದ್ದರು. ರಾಚಪ್ಪನವರ ಮಗನಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿತ್ತಾದರೂ, ಈವರೆಗೂ ಉದ್ಯೋಗ ಕಲ್ಪಿಸಿಲ್ಲ. ಅದ್ದರಿಂದ, ಈ ಕುರಿತಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು.