ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ವಿದ್ಯಾರ್ಥಿಗಳನ್ನು ಮೇ 1ರಿಂದ ಹೊರ ಹಾಕುವಂತೆ ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದ್ದು, ವಿಶ್ವವಿದ್ಯಾಲಯದ ಈ ಸೂಚನೆಗೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುವಿಸಿಇ ಎಂಜಿನಿಯರಿಂಗ್ ಕಾಲೇಜನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿರುವುದರಿಂದ ಇನ್ನು ಬೆಂಗಳೂರು ವಿಶ್ವವಿದ್ಯಾಯದ ವ್ಯಾಪ್ತಿಗೆ ಒಳಪಡುವುದಿಲ್ಲ. ಹೀಗಾಗಿ, ಯುವಿಸಿಇ ವಿದ್ಯಾರ್ಥಿಗಳಿಗಾಗಿ ಅನುದಾನ ಸಹ ಮಂಜೂರಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಮೂರು ದಿನಗಳ ಒಳಗೆ ತಾವು ಇದ್ದ ವಸತಿ ನಿಲಯಗಳನ್ನು ಖಾಲಿ ಮಾಡಬೇಕೆಂದು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ.