<p><strong>ಬೆಂಗಳೂರು:</strong> ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಹದೇವಪುರ ವಲಯದ ನಲ್ಲೂರುಹಳ್ಳಿ ಮೆಟ್ರೊ ನಿಲ್ದಾಣದಿಂದ ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ ಮುಖಾಂತರ ವೈಟ್ಫೀಲ್ಡ್ ಮುಖ್ಯರಸ್ತೆವರೆಗೆ ಬುಧವಾರ ಪರಿಶೀಲನೆ ನಡೆಸಿ, ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೇಳಿದರು.</p>.<p>ನಲ್ಲೂರಹಳ್ಳಿ ಕಾಲೊನಿಯ 3ನೇ ಅಡ್ಡರಸ್ತೆ ಹಾಗೂ 7ನೇ ಅಡ್ಡರಸ್ತೆಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ನಿಯಮಾನುಸಾರ ಅನಧಿಕೃತ ಕಟ್ಟಡದ ಭಾಗವನ್ನು ತ್ವರಿತವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಡಾಡ್ಸ್ ವರ್ತ್ ಎನ್ಕ್ಲೇವ್ ರಸ್ತೆ ಬಳಿ ಚರಂಡಿಯ ನೀರು ರಸ್ತೆಗೆ ಬರುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ ಕಟ್ಟಡದ ಮಾಲೀಕರಿಗೆ ನೋಟಿಸ್ ನೀಡಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ಆದೇಶಿಸಿದರು.</p>.<p>ನಲ್ಲೂರಹಳ್ಳಿ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ತೆರವುಗೊಳಿಸಬೇಕು. ರಾಜಕಾಲುವೆಗೆ ತಡೆಗೋಡೆ ನಿರ್ಮಿಸಬೇಕು, ಬಫರ್ ವಲಯದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಬಾರದು ಎಂದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ಹಾಗೂ ಅನಧಿಕೃತ ಒಎಫ್ಸಿ ತೆರವುಗೊಳಿಸಿ, ರಸ್ತೆ ಪಕ್ಕದ ಚರಂಡಿಗಳ ಹೂಳೆತ್ತಬೇಕು. ಮುರಿದುಬಿದ್ದ ಸ್ಲ್ಯಾಬ್ಗಳನ್ನು ಸರಿಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಲಯ ಆಯುಕ್ತ ರಮೇಶ್, ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಹದೇವಪುರ ವಲಯದ ನಲ್ಲೂರುಹಳ್ಳಿ ಮೆಟ್ರೊ ನಿಲ್ದಾಣದಿಂದ ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ ಮುಖಾಂತರ ವೈಟ್ಫೀಲ್ಡ್ ಮುಖ್ಯರಸ್ತೆವರೆಗೆ ಬುಧವಾರ ಪರಿಶೀಲನೆ ನಡೆಸಿ, ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೇಳಿದರು.</p>.<p>ನಲ್ಲೂರಹಳ್ಳಿ ಕಾಲೊನಿಯ 3ನೇ ಅಡ್ಡರಸ್ತೆ ಹಾಗೂ 7ನೇ ಅಡ್ಡರಸ್ತೆಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ನಿಯಮಾನುಸಾರ ಅನಧಿಕೃತ ಕಟ್ಟಡದ ಭಾಗವನ್ನು ತ್ವರಿತವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಡಾಡ್ಸ್ ವರ್ತ್ ಎನ್ಕ್ಲೇವ್ ರಸ್ತೆ ಬಳಿ ಚರಂಡಿಯ ನೀರು ರಸ್ತೆಗೆ ಬರುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ ಕಟ್ಟಡದ ಮಾಲೀಕರಿಗೆ ನೋಟಿಸ್ ನೀಡಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ಆದೇಶಿಸಿದರು.</p>.<p>ನಲ್ಲೂರಹಳ್ಳಿ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ತೆರವುಗೊಳಿಸಬೇಕು. ರಾಜಕಾಲುವೆಗೆ ತಡೆಗೋಡೆ ನಿರ್ಮಿಸಬೇಕು, ಬಫರ್ ವಲಯದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಬಾರದು ಎಂದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ಹಾಗೂ ಅನಧಿಕೃತ ಒಎಫ್ಸಿ ತೆರವುಗೊಳಿಸಿ, ರಸ್ತೆ ಪಕ್ಕದ ಚರಂಡಿಗಳ ಹೂಳೆತ್ತಬೇಕು. ಮುರಿದುಬಿದ್ದ ಸ್ಲ್ಯಾಬ್ಗಳನ್ನು ಸರಿಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಲಯ ಆಯುಕ್ತ ರಮೇಶ್, ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>