<p><strong>ಬೆಂಗಳೂರು: </strong>‘ಕಬ್ಬನ್ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ಹೈಕೋರ್ಟ್ ವಾಹನ ನಿಲುಗಡೆ ಪ್ರದೇಶದಲ್ಲಿರುವ ಸಣ್ಣ ಗುಂಡಿಗೆ ನೀರು ತುಂಬಿಸಿ’ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರಿಗೆ ಹೈಕೋರ್ಟ್ ಸೂಚಿಸಿದೆ.</p>.<p>ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅವರ ಆದೇಶದ ಅನುಸಾರ, ಆಡಳಿತ ವಿಭಾಗದ ರಿಜಿಸ್ಟ್ರಾರ್ ವೆಂಕಟೇಶ್ ನಾಯಕ್ ತೋಟಗಾರಿಕೆ ಇಲಾಖೆಗೆ ಇದೇ 7ರಂದು ಪತ್ರ ಬರೆದು ಸೂಚಿಸಿದ್ದಾರೆ.</p>.<p>‘ಕಬ್ಬನ್ ಪಾರ್ಕ್ನಲ್ಲಿ ನೂರಾರು ಬಗೆಯ ಪಕ್ಷಿ, ಅಳಿಲು, ನಾಯಿಗಳಿವೆ. ಅವುಗಳಿಗೆ ಕುಡಿಯುವ ನೀರು ಒದಗಿಸಲು ಹೈಕೋರ್ಟ್ ವಾಹನ ನಿಲುಗಡೆ ಜಾಗದಲ್ಲಿ ಮೂರು ಸಿಮೆಂಟ್ ಪಾಟ್ ಹಾಗೂ ತೆರೆದ ಗುಂಡಿ ನಿರ್ಮಿಸಲಾಗಿದೆ. ಅವುಗಳಲ್ಲಿ ನೀರು ತುಂಬಿಸುವ ಕೆಲಸವನ್ನು ತೋಟಗಾರಿಕೆ ಇಲಾಖೆ ನಿರ್ವಹಣೆ ಮಾಡುತ್ತಿತ್ತು. ಆದರೆ, ಲಾಕ್ಡೌನ್ನಿಂದ ನೀರು ತುಂಬಿಸುವವರಿಲ್ಲದೆ ಅವು ಬತ್ತಿಹೋಗಿವೆ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕಬ್ಬನ್ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ಹೈಕೋರ್ಟ್ ವಾಹನ ನಿಲುಗಡೆ ಪ್ರದೇಶದಲ್ಲಿರುವ ಸಣ್ಣ ಗುಂಡಿಗೆ ನೀರು ತುಂಬಿಸಿ’ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರಿಗೆ ಹೈಕೋರ್ಟ್ ಸೂಚಿಸಿದೆ.</p>.<p>ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅವರ ಆದೇಶದ ಅನುಸಾರ, ಆಡಳಿತ ವಿಭಾಗದ ರಿಜಿಸ್ಟ್ರಾರ್ ವೆಂಕಟೇಶ್ ನಾಯಕ್ ತೋಟಗಾರಿಕೆ ಇಲಾಖೆಗೆ ಇದೇ 7ರಂದು ಪತ್ರ ಬರೆದು ಸೂಚಿಸಿದ್ದಾರೆ.</p>.<p>‘ಕಬ್ಬನ್ ಪಾರ್ಕ್ನಲ್ಲಿ ನೂರಾರು ಬಗೆಯ ಪಕ್ಷಿ, ಅಳಿಲು, ನಾಯಿಗಳಿವೆ. ಅವುಗಳಿಗೆ ಕುಡಿಯುವ ನೀರು ಒದಗಿಸಲು ಹೈಕೋರ್ಟ್ ವಾಹನ ನಿಲುಗಡೆ ಜಾಗದಲ್ಲಿ ಮೂರು ಸಿಮೆಂಟ್ ಪಾಟ್ ಹಾಗೂ ತೆರೆದ ಗುಂಡಿ ನಿರ್ಮಿಸಲಾಗಿದೆ. ಅವುಗಳಲ್ಲಿ ನೀರು ತುಂಬಿಸುವ ಕೆಲಸವನ್ನು ತೋಟಗಾರಿಕೆ ಇಲಾಖೆ ನಿರ್ವಹಣೆ ಮಾಡುತ್ತಿತ್ತು. ಆದರೆ, ಲಾಕ್ಡೌನ್ನಿಂದ ನೀರು ತುಂಬಿಸುವವರಿಲ್ಲದೆ ಅವು ಬತ್ತಿಹೋಗಿವೆ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>