ಪ್ರಕರಣದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ 2023ರಲ್ಲೇ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದಲ್ಲಿ ಜಮೀನು ಮಾರುವವರು ಮತ್ತು ಖರೀದಿದಾರರ ಮಧ್ಯೆ ಹಣಕಾಸಿನ ವ್ಯವಹಾರ ನಡೆದಿತ್ತು. ನಾನು ಮಾರಾಟಗಾರರ ಪರವಾಗಿ ಮಧ್ಯ ಪ್ರವೇಶಿಸಿ ಬೆದರಿಕೆ ಹಾಕಿದ್ದೇನೆ ಎಂಬ ಆರೋಪದಲ್ಲಿ ಹುರುಳಿಲ್ಲ’ ಎಂದಿದ್ದಾರೆ.