<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಮಿ ಬಿಟ್ಟುಕೊಡಲು ಅಸಮ್ಮತಿ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿರುವ ಭೂಮಾಲೀಕರು ಈ ವ್ಯಾಜ್ಯವನ್ನು ನ್ಯಾಯಾಲಯದಿಂದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಸಮ್ಮತಿ ಸೂಚಿಸಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಇನ್ನೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಈ ಬಡಾವಣೆಯಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಅಡ್ಡಿ ಉಂಟಾಗಿದೆ. ಭೂ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಬಡಾವಣೆಯ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು. ಹಾಗಾಗಿ ವಿಶ್ವನಾಥ್ ಅವರು ಈ ಬಡಾವಣೆಯ ಕನ್ನಹಳ್ಳಿ, ಅರ್ಚಕರಹಳ್ಳಿ ಬಡಾವಣೆ, ಸೂಳೆಕೆರೆ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ವ್ಯಾಜ್ಯವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಬಗ್ಗೆ ಭೂಮಾಲೀಕರ ಮನವೊಲಿಸುವ ಪ್ರಯತ್ನ ಮಾಡಿದರು.</p>.<p>‘ಈಗಿನ ನಿಯಮಗಳ ಪ್ರಕಾರ ಜಮೀನು ನೀಡಿರುವ ಭೂಮಾಲೀಕ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನವನ್ನು40:60 ಅನುಪಾತದಲ್ಲಿ ನೀಡಲು ಅಡ್ಡಿ ಇಲ್ಲ. ನಮ್ಮ ಪಕ್ಷ ರೈತರ ಹಿತವನ್ನು ಯಾವತ್ತೂ ಕೈಬಿಡುವುದಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸಲು ಬಿಡಿಎ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ವಿಶ್ವನಾಥ್ ಭರವಸೆ ನೀಡಿದರು.</p>.<p class="Subhead">ಡಿಸೆಂಬರ್ನಲ್ಲಿ ನಿವೇಶನ ಹಂಚಿಕೆ: ಬಡಾವಣೆಯಲ್ಲಿ ನಿವೇಶನ ಹಂಚಿಕೆಯಮೂರನೇ ಹಂತದ ಪ್ರಕ್ರಿಯೆಯನ್ನು ಈ ವರ್ಷದ ಡಿಸೆಂಬರ್ ಅಂತ್ಯದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ನಾಗರಿಕರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆ ಆರಂಭಿಸುವ ಮುನ್ನ, ಭೂಮಿ ಬಿಟ್ಟುಕೊಟ್ಟವರಿಗೆ ಅಭಿವೃದ್ಧಿಪಡಿಸಿದ ನಿವೇಶನ ನೀಡಲಿದ್ದೇವೆ’ ಎಂದರು.</p>.<p class="Briefhead"><strong>ಪರಿಹಾರ ವಿಳಂಬ: ರೈತರ ಆಕ್ರೋಶ</strong></p>.<p>‘ರೈತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇಲ್ಲಸಲ್ಲದ ದಾಖಲೆಗಳನ್ನು ಕೇಳುತ್ತಾ ಸತಾಯಿಸುತ್ತಿದ್ದಾರೆ’ ಎಂದು ರೈತ ಮುಖಂಡರಾದ ಕೃಷ್ಣಪ್ಪ ಮತ್ತು ಚನ್ನಪ್ಪ ದೂರಿದರು.</p>.<p>‘ನ್ಯಾಯಸಮ್ಮತವಾಗಿ ಪರಿಹಾರ ನೀಡಿದರೆ ಮೊಕದ್ದಮೆಗಳನ್ನು ಹಿಂಪಡೆದು ಬಡಾವಣೆ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ’ ಎಂದರು. ಸ್ಥಳದಲ್ಲಿದ್ದ ಅನೇಕ ರೈತರು ಇದಕ್ಕೆ ಸಹಮತ ವ್ಯಕ್ತಪಡಿಸಿದರು.</p>.<p class="Briefhead"><strong>'ಸ್ಮಶಾನಕ್ಕೆ ತಲಾ 2 ಎಕರೆ’</strong></p>.<p>‘ಬಡಾವಣೆಗೆ ಭೂಮಿ ನೀಡಿರುವ ಕೆಲವು ಗ್ರಾಮಗಳಲ್ಲಿ ಸ್ಮಶಾನ ಇಲ್ಲ. ಇಂತಹ ಗ್ರಾಮಗಳಲ್ಲಿ ಸ್ಮಶಾನ ನಿರ್ಮಾಣಕ್ಕಾಗಿ ತಲಾ ಎರಡು ಎಕರೆ ಜಮೀನನ್ನು ಮೀಸಲಿಡಬೇಕು’ ಎಂದು ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು.</p>.<p>‘ಬಡಾವಣೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಪ್ರತಿ ಬ್ಲಾಕ್ನಲ್ಲಿಯೂ ಮಕ್ಕಳಿಗಾಗಿ ಆಟದ ಮೈದಾನವೂ ಸೇರಿದಂತೆ ಸಕಲ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಮಿ ಬಿಟ್ಟುಕೊಡಲು ಅಸಮ್ಮತಿ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿರುವ ಭೂಮಾಲೀಕರು ಈ ವ್ಯಾಜ್ಯವನ್ನು ನ್ಯಾಯಾಲಯದಿಂದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಸಮ್ಮತಿ ಸೂಚಿಸಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಇನ್ನೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಈ ಬಡಾವಣೆಯಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಅಡ್ಡಿ ಉಂಟಾಗಿದೆ. ಭೂ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಬಡಾವಣೆಯ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು. ಹಾಗಾಗಿ ವಿಶ್ವನಾಥ್ ಅವರು ಈ ಬಡಾವಣೆಯ ಕನ್ನಹಳ್ಳಿ, ಅರ್ಚಕರಹಳ್ಳಿ ಬಡಾವಣೆ, ಸೂಳೆಕೆರೆ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ವ್ಯಾಜ್ಯವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಬಗ್ಗೆ ಭೂಮಾಲೀಕರ ಮನವೊಲಿಸುವ ಪ್ರಯತ್ನ ಮಾಡಿದರು.</p>.<p>‘ಈಗಿನ ನಿಯಮಗಳ ಪ್ರಕಾರ ಜಮೀನು ನೀಡಿರುವ ಭೂಮಾಲೀಕ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನವನ್ನು40:60 ಅನುಪಾತದಲ್ಲಿ ನೀಡಲು ಅಡ್ಡಿ ಇಲ್ಲ. ನಮ್ಮ ಪಕ್ಷ ರೈತರ ಹಿತವನ್ನು ಯಾವತ್ತೂ ಕೈಬಿಡುವುದಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸಲು ಬಿಡಿಎ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ವಿಶ್ವನಾಥ್ ಭರವಸೆ ನೀಡಿದರು.</p>.<p class="Subhead">ಡಿಸೆಂಬರ್ನಲ್ಲಿ ನಿವೇಶನ ಹಂಚಿಕೆ: ಬಡಾವಣೆಯಲ್ಲಿ ನಿವೇಶನ ಹಂಚಿಕೆಯಮೂರನೇ ಹಂತದ ಪ್ರಕ್ರಿಯೆಯನ್ನು ಈ ವರ್ಷದ ಡಿಸೆಂಬರ್ ಅಂತ್ಯದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ನಾಗರಿಕರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆ ಆರಂಭಿಸುವ ಮುನ್ನ, ಭೂಮಿ ಬಿಟ್ಟುಕೊಟ್ಟವರಿಗೆ ಅಭಿವೃದ್ಧಿಪಡಿಸಿದ ನಿವೇಶನ ನೀಡಲಿದ್ದೇವೆ’ ಎಂದರು.</p>.<p class="Briefhead"><strong>ಪರಿಹಾರ ವಿಳಂಬ: ರೈತರ ಆಕ್ರೋಶ</strong></p>.<p>‘ರೈತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇಲ್ಲಸಲ್ಲದ ದಾಖಲೆಗಳನ್ನು ಕೇಳುತ್ತಾ ಸತಾಯಿಸುತ್ತಿದ್ದಾರೆ’ ಎಂದು ರೈತ ಮುಖಂಡರಾದ ಕೃಷ್ಣಪ್ಪ ಮತ್ತು ಚನ್ನಪ್ಪ ದೂರಿದರು.</p>.<p>‘ನ್ಯಾಯಸಮ್ಮತವಾಗಿ ಪರಿಹಾರ ನೀಡಿದರೆ ಮೊಕದ್ದಮೆಗಳನ್ನು ಹಿಂಪಡೆದು ಬಡಾವಣೆ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ’ ಎಂದರು. ಸ್ಥಳದಲ್ಲಿದ್ದ ಅನೇಕ ರೈತರು ಇದಕ್ಕೆ ಸಹಮತ ವ್ಯಕ್ತಪಡಿಸಿದರು.</p>.<p class="Briefhead"><strong>'ಸ್ಮಶಾನಕ್ಕೆ ತಲಾ 2 ಎಕರೆ’</strong></p>.<p>‘ಬಡಾವಣೆಗೆ ಭೂಮಿ ನೀಡಿರುವ ಕೆಲವು ಗ್ರಾಮಗಳಲ್ಲಿ ಸ್ಮಶಾನ ಇಲ್ಲ. ಇಂತಹ ಗ್ರಾಮಗಳಲ್ಲಿ ಸ್ಮಶಾನ ನಿರ್ಮಾಣಕ್ಕಾಗಿ ತಲಾ ಎರಡು ಎಕರೆ ಜಮೀನನ್ನು ಮೀಸಲಿಡಬೇಕು’ ಎಂದು ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು.</p>.<p>‘ಬಡಾವಣೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಪ್ರತಿ ಬ್ಲಾಕ್ನಲ್ಲಿಯೂ ಮಕ್ಕಳಿಗಾಗಿ ಆಟದ ಮೈದಾನವೂ ಸೇರಿದಂತೆ ಸಕಲ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>