ಇನ್ನೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಈ ಬಡಾವಣೆಯಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಅಡ್ಡಿ ಉಂಟಾಗಿದೆ. ಭೂ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಬಡಾವಣೆಯ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು. ಹಾಗಾಗಿ ವಿಶ್ವನಾಥ್ ಅವರು ಈ ಬಡಾವಣೆಯ ಕನ್ನಹಳ್ಳಿ, ಅರ್ಚಕರಹಳ್ಳಿ ಬಡಾವಣೆ, ಸೂಳೆಕೆರೆ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ವ್ಯಾಜ್ಯವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಬಗ್ಗೆ ಭೂಮಾಲೀಕರ ಮನವೊಲಿಸುವ ಪ್ರಯತ್ನ ಮಾಡಿದರು.