<p><strong>ಬೆಂಗಳೂರು</strong>: ‘ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹರ ಒದಗಿಸಲಿದ್ದೇವೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಸಚಿವ ಎಸ್.ಟಿ.ಸೋಮಶೇಖರ್ ಜೊತೆ ಸೇರಿ ಸೋಮವಾರ ಸಭೆ ನಡೆಸಿದ ಅವರು, ಈ ಬಡಾವಣೆಗೆ ಭೂಮಿ ನೀಡಿರುವ ರೈತರ ಸಮಸ್ಯೆಗಳನ್ನು ಆಲಿಸಿದರು. ಭೂಮಿ ನೀಡಿದವರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆಯಲ್ಲಿ ವಿಳಂಬ, ಕಡತ ವಿಲೇವಾರಿಗೆ ಅಲೆದಾಡಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ರೈತರು ಗಮನ ಸೆಳೆದರು.</p>.<p>ಎಸ್.ಟಿ.ಸೋಮಶೇಖರ್, ‘ನನ್ನ ಮತಕ್ಷೇತ್ರದ 14 ಗ್ರಾಮಗಳ ರೈತರು ಕೆಂಪೇಗೌಡ ಬಡಾವಣೆಗೆ ಭೂಮಿಯನ್ನು ನೀಡಿದ್ದಾರೆ. ಐದಾರು ವರ್ಷಗಳ ಬಳಿಕವೂ ಅವರಿಗೆ ಪ್ರೋತ್ಸಾಹ ಯೋಜನೆಯಡಿ ಅಭಿವೃದ್ಧಿಪಡಿಸಿದ ನಿವೇಶನ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ರೈತರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಬೇಕು. ಅವರಿಗೆ ಯಾವುದೇ ತೊಂದರೆಗಳನ್ನು ನೀಡದೇ ಕೆಲಸಗಳನ್ನು ಮಾಡಿಕೊಡಬೇಕು. ಅವರಿಗೆ ಅಗೌರವ ತೋರುವುದನ್ನು ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>‘ರೈತರು ನೀಡಿರುವ ಜಮೀನಿನಲ್ಲಿಯೇ ಅವರಿಗೆ ಪ್ರೋತ್ಸಾಹಕ ಯೋಜನೆಯಡಿ ನಿವೇಶನ ನೀಡಲು ಆದ್ಯತೆ ನೀಡುತ್ತೇವೆ. ಅವರ ಜಮೀನಿನಲ್ಲಿ ನಿವೇಶನ ಲಭ್ಯವಿಲ್ಲದಿದ್ದರೆ ಅದರ ಸನಿಹದಲ್ಲಿಯೇ ನಿವೇಶನ ಹಂಚಿಕೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ, ಕಾರ್ಯದರ್ಶಿ ಆನಂದ, ರೈತ ಮುಖಂಡರಾದ ಚನ್ನಪ್ಪ, ಕೃಷ್ಣಪ್ಪ ಮೊದಲಾದವರು ಸಭೆಯಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಮಿ ಬಿಟ್ಟುಕೊಟ್ಟ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹರ ಒದಗಿಸಲಿದ್ದೇವೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಸಚಿವ ಎಸ್.ಟಿ.ಸೋಮಶೇಖರ್ ಜೊತೆ ಸೇರಿ ಸೋಮವಾರ ಸಭೆ ನಡೆಸಿದ ಅವರು, ಈ ಬಡಾವಣೆಗೆ ಭೂಮಿ ನೀಡಿರುವ ರೈತರ ಸಮಸ್ಯೆಗಳನ್ನು ಆಲಿಸಿದರು. ಭೂಮಿ ನೀಡಿದವರಿಗೆ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆಯಲ್ಲಿ ವಿಳಂಬ, ಕಡತ ವಿಲೇವಾರಿಗೆ ಅಲೆದಾಡಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ರೈತರು ಗಮನ ಸೆಳೆದರು.</p>.<p>ಎಸ್.ಟಿ.ಸೋಮಶೇಖರ್, ‘ನನ್ನ ಮತಕ್ಷೇತ್ರದ 14 ಗ್ರಾಮಗಳ ರೈತರು ಕೆಂಪೇಗೌಡ ಬಡಾವಣೆಗೆ ಭೂಮಿಯನ್ನು ನೀಡಿದ್ದಾರೆ. ಐದಾರು ವರ್ಷಗಳ ಬಳಿಕವೂ ಅವರಿಗೆ ಪ್ರೋತ್ಸಾಹ ಯೋಜನೆಯಡಿ ಅಭಿವೃದ್ಧಿಪಡಿಸಿದ ನಿವೇಶನ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ರೈತರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಬೇಕು. ಅವರಿಗೆ ಯಾವುದೇ ತೊಂದರೆಗಳನ್ನು ನೀಡದೇ ಕೆಲಸಗಳನ್ನು ಮಾಡಿಕೊಡಬೇಕು. ಅವರಿಗೆ ಅಗೌರವ ತೋರುವುದನ್ನು ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>‘ರೈತರು ನೀಡಿರುವ ಜಮೀನಿನಲ್ಲಿಯೇ ಅವರಿಗೆ ಪ್ರೋತ್ಸಾಹಕ ಯೋಜನೆಯಡಿ ನಿವೇಶನ ನೀಡಲು ಆದ್ಯತೆ ನೀಡುತ್ತೇವೆ. ಅವರ ಜಮೀನಿನಲ್ಲಿ ನಿವೇಶನ ಲಭ್ಯವಿಲ್ಲದಿದ್ದರೆ ಅದರ ಸನಿಹದಲ್ಲಿಯೇ ನಿವೇಶನ ಹಂಚಿಕೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ, ಕಾರ್ಯದರ್ಶಿ ಆನಂದ, ರೈತ ಮುಖಂಡರಾದ ಚನ್ನಪ್ಪ, ಕೃಷ್ಣಪ್ಪ ಮೊದಲಾದವರು ಸಭೆಯಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>