<p><strong>ಬೆಂಗಳೂರು</strong>: ‘ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದಿಂದ ಶುಕ್ರವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಯಿತು.</p><p>ಎನ್ಪಿಎಸ್ ಅನ್ನೇ ಯುಪಿಎಸ್ ಹೆಸರಲ್ಲಿ ಜಾರಿ ಮಾಡುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ‘ಇದು ಒಂದು ದಿನಕ್ಕೆ ಸೀಮಿತವಾದ ಧರಣಿ ಎಂದು ಸರ್ಕಾರ ಭಾವಿಸಬಾರದು. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p><p>‘ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಎನ್ಪಿಎಸ್ ರದ್ದುಗೊಳಿಸುವುದನ್ನು 2025–26ನೇ ಸಾಲಿನ ಬಜೆಟ್ನಲ್ಲಿ ಪ್ರಕಟಿಸಬೇಕು’ ಎಂದು ಸಂಘದ ಅಧ್ಯಕ್ಷ ಶಾಂತರಾಮ ಆಗ್ರಹಿಸಿದರು.</p><p>‘ಎನ್ಪಿಎಸ್ ಅನ್ನು ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಎಂದು ಹೆಸರಿಟ್ಟು ಜಾರಿಮಾಡಲು ಸಿದ್ಧತೆ ನಡೆಸಿದೆ. ನಮಗೆ ಯುಪಿಎಸ್, ಎನ್ಪಿಎಸ್ ಬೇಡ. ಹಳೇ ಪಿಂಚಣಿ ಯೋಜನೆಯನ್ನೇ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.</p><p>ಸಂಘದ ಪದಾಧಿಕಾರಿಗಳಾದ ಎಸ್.ಎಸ್. ಹದ್ಲಿ, ದೊಡ್ಡ ತಮ್ಮೇಗೌಡ, ರಂಗನಾಥ ಜಿ., ಉಮೇಶ ತೋಟದ, ದಯಾನಂದ ಎಲ್.ಎಂ., ರಜನಿಕಾಂತ ಎಸ್.ಟಿ., ಶಶಿಕಲಾ ಎನ್.ಕೆ., ವೃಷಭೇಂದ್ರ ಎಸ್. ಹಿರೇಮಠ, ಗಜೇಂದ್ರ ಎ.ಎನ್., ರಾಜು ಮಾಳವಾಡ ಸಹಿತ ಸಾವಿರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದಿಂದ ಶುಕ್ರವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಯಿತು.</p><p>ಎನ್ಪಿಎಸ್ ಅನ್ನೇ ಯುಪಿಎಸ್ ಹೆಸರಲ್ಲಿ ಜಾರಿ ಮಾಡುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ‘ಇದು ಒಂದು ದಿನಕ್ಕೆ ಸೀಮಿತವಾದ ಧರಣಿ ಎಂದು ಸರ್ಕಾರ ಭಾವಿಸಬಾರದು. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p><p>‘ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಎನ್ಪಿಎಸ್ ರದ್ದುಗೊಳಿಸುವುದನ್ನು 2025–26ನೇ ಸಾಲಿನ ಬಜೆಟ್ನಲ್ಲಿ ಪ್ರಕಟಿಸಬೇಕು’ ಎಂದು ಸಂಘದ ಅಧ್ಯಕ್ಷ ಶಾಂತರಾಮ ಆಗ್ರಹಿಸಿದರು.</p><p>‘ಎನ್ಪಿಎಸ್ ಅನ್ನು ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಎಂದು ಹೆಸರಿಟ್ಟು ಜಾರಿಮಾಡಲು ಸಿದ್ಧತೆ ನಡೆಸಿದೆ. ನಮಗೆ ಯುಪಿಎಸ್, ಎನ್ಪಿಎಸ್ ಬೇಡ. ಹಳೇ ಪಿಂಚಣಿ ಯೋಜನೆಯನ್ನೇ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.</p><p>ಸಂಘದ ಪದಾಧಿಕಾರಿಗಳಾದ ಎಸ್.ಎಸ್. ಹದ್ಲಿ, ದೊಡ್ಡ ತಮ್ಮೇಗೌಡ, ರಂಗನಾಥ ಜಿ., ಉಮೇಶ ತೋಟದ, ದಯಾನಂದ ಎಲ್.ಎಂ., ರಜನಿಕಾಂತ ಎಸ್.ಟಿ., ಶಶಿಕಲಾ ಎನ್.ಕೆ., ವೃಷಭೇಂದ್ರ ಎಸ್. ಹಿರೇಮಠ, ಗಜೇಂದ್ರ ಎ.ಎನ್., ರಾಜು ಮಾಳವಾಡ ಸಹಿತ ಸಾವಿರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>