‘ಸ್ಕೈವಾಕ್ ಯಾವ ಜಾಗದಲ್ಲಿ ನಿರ್ಮಿಸಬೇಕು ಎಂಬುದನ್ನು ಕೋರ್ಟ್ ನಿರ್ಧರಿಸುವುದಿಲ್ಲ.ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ ಪ್ರಕಾರ ಯಾವುದೇ ಪ್ರಾಧಿಕಾರವು ಅನುಮತಿ ಪಡೆಯದೆ ಮರಗಳನ್ನು ಕಡಿಯಲು ಸಾಧ್ಯವಿಲ್ಲ. ಇದು ಬಿಬಿಎಂಪಿಗೂ ತಿಳಿದಿದೆ. ಅನುಮತಿ ಪಡೆಯದೆ ಮರ ಕಡಿಯುವುದಿಲ್ಲ ಎಂಬುದನ್ನು ಪಾಲಿಕೆ ಖಚಿತಪಡಿಸಬೇಕು. ಉದ್ದೇಶಿತ ಸ್ಕೈವಾಕ್ ಸ್ಥಳದ ಸುತ್ತಮುತ್ತ ಪಾದಚಾರಿ ಮಾರ್ಗ ಒತ್ತುವರಿಯಾಗಿದ್ದರೆ ತೆರವುಗೊಳಿಸಲು ಅಧಿಕಾರಿಗಳನ್ನು ನಿಯೋಜಿಸಬೇಕು. ಈ ನಿರ್ದೇಶನಗಳನ್ನು ಕಾರ್ಯಗತಗೊಳಿಸಿದ ಬಗ್ಗೆ ಅನುಸರಣೆ ವರದಿ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ಪೀಠ ನಿರ್ದೇಶನ ನೀಡಿತು.