<p><strong>ಬೆಂಗಳೂರು: ಸ</strong>ರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಐಆರ್ ಕೋಟಾ ನಿಗದಿ ಮಾಡಿರುವುದನ್ನು ವಿರೋಧಿಸಿದ ಭಾರತೀಯ ವೈದ್ಯರ ಸಂಘದ ಕರ್ನಾಟಕ ಘಟಕದ ಮಾಜಿ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು, ‘ವೈದ್ಯಕೀಯ ಕಾಲೇಜುಗಳನ್ನು ನಡೆಸಲಾಗದಷ್ಟು ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ’ ಎಂದು ಪ್ರಶ್ನಿಸಿದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಶೇ 15ರಷ್ಟು ಎನ್ಆರ್ಐ ಕೋಟಾ ಹಿಂಪಡೆಯುವಂತೆ ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನಗರದ ಗಾಂಧಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿದ್ಯಾರ್ಥಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಹಿಂದೆ ವೈದ್ಯಕೀಯ ಸೇವಾ ಕ್ಷೇತ್ರವಾಗಿತ್ತು. ಶಿಕ್ಷಣದ ಖಾಸಗೀಕರಣದ ಪರಿಣಾಮವಾಗಿ ವೈದ್ಯರು ಮತ್ತು ರೋಗಿಗಳ ನಡುವಿನ ಸಂಬಂಧ ವ್ಯಾಪಾರವಾಗಿ ಬದಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎನ್ಆರ್ಐ ಕೋಟಾ ತರುವುದರ ಮೂಲಕ ಖಾಸಗೀಕರಣ ಮಾಡುವುದು ಸರ್ಕಾರದ ಹುನ್ನಾರವಾಗಿದ್ದು, ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒನ ಅಖಿಲ ಭಾರತ ಉಪಾಧ್ಯಕ್ಷ ಮೃದುಲ್ ಸರ್ಕಾರ್ ಮಾತನಾಡಿ, ‘ಎನ್ಆರ್ಐ ಕೋಟಾವನ್ನು ಪಶ್ಚಿಮ ಬಂಗಾಳದಲ್ಲಿ ಮೊದಲು ಬಾರಿಗೆ ಜಾರಿಗೊಳಿಸಿದಾಗ ಹೋರಾಟ ಮಾಡಿದ್ದೆವು. ಇದರ ಪರಿಣಾಮ ಆದೇಶ ಹಿಂಪಡೆಯಬೇಕಾಯಿತು. ಕರ್ನಾಟಕದಲ್ಲೂ 2019ರಲ್ಲಿ ಈ ನೀತಿ ಜಾರಿ ಮಾಡಿದಾಗ ವಿದ್ಯಾರ್ಥಿಗಳ ಹೋರಾಟದಿಂದ ಸ್ಥಗಿತಗೊಳಿಸಲಾಯಿತು. ಈಗ ಮತ್ತೆ ಇದನ್ನು ತರಲಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ಇಪಿ-2020 ಮತ್ತು ಎನ್ಎಂಸಿ ನೀತಿಗಳು ವೈದ್ಯಕೀಯ ಶಿಕ್ಷಣದಲ್ಲಿ ವ್ಯಾಪಾರೀಕರಣವನ್ನು ಉತ್ತೇಜಿಸುತ್ತವೆ. ಇದನ್ನೇ ಬಳಸಿ ಎನ್ಆರ್ಐ ಕೋಟಾ ಜಾರಿ ಮೂಲಕ ಪ್ರತಿ ವೈದ್ಯಕೀಯ ಸೀಟಿಗೆ ₹25 ಲಕ್ಷ ನಿಗದಿ ಮಾಡಲಾಗುತ್ತಿದೆ. ಈ ನೀತಿಯ ವಿರುದ್ಧ ಹೋರಾಟವನ್ನು ಬಲಪಡಿಸಬೇಕು’ ಎಂದು ಹೇಳಿದರು.</p>.<p>ಮನೋವೈದ್ಯ ಡಾ.ಶಶಿಧರ್ ಬಿಳಗಿ ಮಾತನಾಡಿದರು. ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ ಅಭಯಾ ದಿವಾಕರ್, ಚಂದ್ರಕಲಾ, ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯ್ ಚಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ಸ</strong>ರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಐಆರ್ ಕೋಟಾ ನಿಗದಿ ಮಾಡಿರುವುದನ್ನು ವಿರೋಧಿಸಿದ ಭಾರತೀಯ ವೈದ್ಯರ ಸಂಘದ ಕರ್ನಾಟಕ ಘಟಕದ ಮಾಜಿ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು, ‘ವೈದ್ಯಕೀಯ ಕಾಲೇಜುಗಳನ್ನು ನಡೆಸಲಾಗದಷ್ಟು ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ’ ಎಂದು ಪ್ರಶ್ನಿಸಿದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಶೇ 15ರಷ್ಟು ಎನ್ಆರ್ಐ ಕೋಟಾ ಹಿಂಪಡೆಯುವಂತೆ ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನಗರದ ಗಾಂಧಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿದ್ಯಾರ್ಥಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಹಿಂದೆ ವೈದ್ಯಕೀಯ ಸೇವಾ ಕ್ಷೇತ್ರವಾಗಿತ್ತು. ಶಿಕ್ಷಣದ ಖಾಸಗೀಕರಣದ ಪರಿಣಾಮವಾಗಿ ವೈದ್ಯರು ಮತ್ತು ರೋಗಿಗಳ ನಡುವಿನ ಸಂಬಂಧ ವ್ಯಾಪಾರವಾಗಿ ಬದಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎನ್ಆರ್ಐ ಕೋಟಾ ತರುವುದರ ಮೂಲಕ ಖಾಸಗೀಕರಣ ಮಾಡುವುದು ಸರ್ಕಾರದ ಹುನ್ನಾರವಾಗಿದ್ದು, ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒನ ಅಖಿಲ ಭಾರತ ಉಪಾಧ್ಯಕ್ಷ ಮೃದುಲ್ ಸರ್ಕಾರ್ ಮಾತನಾಡಿ, ‘ಎನ್ಆರ್ಐ ಕೋಟಾವನ್ನು ಪಶ್ಚಿಮ ಬಂಗಾಳದಲ್ಲಿ ಮೊದಲು ಬಾರಿಗೆ ಜಾರಿಗೊಳಿಸಿದಾಗ ಹೋರಾಟ ಮಾಡಿದ್ದೆವು. ಇದರ ಪರಿಣಾಮ ಆದೇಶ ಹಿಂಪಡೆಯಬೇಕಾಯಿತು. ಕರ್ನಾಟಕದಲ್ಲೂ 2019ರಲ್ಲಿ ಈ ನೀತಿ ಜಾರಿ ಮಾಡಿದಾಗ ವಿದ್ಯಾರ್ಥಿಗಳ ಹೋರಾಟದಿಂದ ಸ್ಥಗಿತಗೊಳಿಸಲಾಯಿತು. ಈಗ ಮತ್ತೆ ಇದನ್ನು ತರಲಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ಇಪಿ-2020 ಮತ್ತು ಎನ್ಎಂಸಿ ನೀತಿಗಳು ವೈದ್ಯಕೀಯ ಶಿಕ್ಷಣದಲ್ಲಿ ವ್ಯಾಪಾರೀಕರಣವನ್ನು ಉತ್ತೇಜಿಸುತ್ತವೆ. ಇದನ್ನೇ ಬಳಸಿ ಎನ್ಆರ್ಐ ಕೋಟಾ ಜಾರಿ ಮೂಲಕ ಪ್ರತಿ ವೈದ್ಯಕೀಯ ಸೀಟಿಗೆ ₹25 ಲಕ್ಷ ನಿಗದಿ ಮಾಡಲಾಗುತ್ತಿದೆ. ಈ ನೀತಿಯ ವಿರುದ್ಧ ಹೋರಾಟವನ್ನು ಬಲಪಡಿಸಬೇಕು’ ಎಂದು ಹೇಳಿದರು.</p>.<p>ಮನೋವೈದ್ಯ ಡಾ.ಶಶಿಧರ್ ಬಿಳಗಿ ಮಾತನಾಡಿದರು. ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ ಅಭಯಾ ದಿವಾಕರ್, ಚಂದ್ರಕಲಾ, ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯ್ ಚಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>