<p><strong>ಬೆಂಗಳೂರು:</strong> ‘ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು’ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಒತ್ತಾಯಿಸಿದರು.</p>.<p>ಎಚ್.ಎಸ್.ದೊರೆಸ್ವಾಮಿ, ಸಿದ್ದಲಿಂಗಯ್ಯ, ಜರಗನಹಳ್ಳಿ ಶಿವಶಂಕರ್, ಕೋ.ವೆಂ.ರಾಮಕೃಷ್ಣೇಗೌಡ, ಫಾ.ಐಸಾಕ್ ಅವರಿಗೆ ಕರ್ನಾಟಕ ವಿಕಾಸ ರಂಗ ಹಾಗೂ ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಾವ್ಯವಾಗಲಿ ಖಡ್ಗ’ ಎಂಬುದನ್ನು ಅನುಸರಿಸಿದ್ದ ಸಿದ್ದಲಿಂಗಯ್ಯ ಅವರು, ಬುದ್ಧ–ಬಸವಣ್ಣನವರ ತತ್ವಗಳನ್ನು ಜೀವನದ ಭಾಗವಾಗಿಸಿಕೊಂಡಿದ್ದರು. ಅವರು ಬಹುಮುಖ ನೆಲೆಯಲ್ಲಿ ಕನ್ನಡದ ಕೆಲಸ ಮಾಡಿದ್ದರು’ ಎಂದರು.</p>.<p>ಹಿರಿಯ ನಟ ‘ಮುಖ್ಯಮಂತ್ರಿ’ ಚಂದ್ರು, ‘ಕನ್ನಡ ನಾಡು–ನುಡಿಯ ವಿಚಾರದಲ್ಲಿ ಬೆಳಕಿನ ಕಿಡಿಯಾಗಿದ್ದ ಸಿದ್ದಲಿಂಗಯ್ಯ ಅವರ ಹೆಸರನ್ನು ಶಾಶ್ವತಗೊಳಿಸುವ ಜವಾಬ್ದಾರಿ ಸಮಾಜ ಹಾಗೂ ಸರ್ಕಾರದ ಮೇಲಿದೆ’ ಎಂದು ಹೇಳಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಜೀವಂತ ಸಾಕ್ಷಿಯಾಗಿ, ಸರಳ ಜೀವನ ನಡೆಸಿದ್ದ ಎಚ್.ಎಸ್.ದೊರೆಸ್ವಾಮಿ ಅವರ ಮಾದರಿ ಜೀವನವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸ ಆಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು’ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಒತ್ತಾಯಿಸಿದರು.</p>.<p>ಎಚ್.ಎಸ್.ದೊರೆಸ್ವಾಮಿ, ಸಿದ್ದಲಿಂಗಯ್ಯ, ಜರಗನಹಳ್ಳಿ ಶಿವಶಂಕರ್, ಕೋ.ವೆಂ.ರಾಮಕೃಷ್ಣೇಗೌಡ, ಫಾ.ಐಸಾಕ್ ಅವರಿಗೆ ಕರ್ನಾಟಕ ವಿಕಾಸ ರಂಗ ಹಾಗೂ ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಾವ್ಯವಾಗಲಿ ಖಡ್ಗ’ ಎಂಬುದನ್ನು ಅನುಸರಿಸಿದ್ದ ಸಿದ್ದಲಿಂಗಯ್ಯ ಅವರು, ಬುದ್ಧ–ಬಸವಣ್ಣನವರ ತತ್ವಗಳನ್ನು ಜೀವನದ ಭಾಗವಾಗಿಸಿಕೊಂಡಿದ್ದರು. ಅವರು ಬಹುಮುಖ ನೆಲೆಯಲ್ಲಿ ಕನ್ನಡದ ಕೆಲಸ ಮಾಡಿದ್ದರು’ ಎಂದರು.</p>.<p>ಹಿರಿಯ ನಟ ‘ಮುಖ್ಯಮಂತ್ರಿ’ ಚಂದ್ರು, ‘ಕನ್ನಡ ನಾಡು–ನುಡಿಯ ವಿಚಾರದಲ್ಲಿ ಬೆಳಕಿನ ಕಿಡಿಯಾಗಿದ್ದ ಸಿದ್ದಲಿಂಗಯ್ಯ ಅವರ ಹೆಸರನ್ನು ಶಾಶ್ವತಗೊಳಿಸುವ ಜವಾಬ್ದಾರಿ ಸಮಾಜ ಹಾಗೂ ಸರ್ಕಾರದ ಮೇಲಿದೆ’ ಎಂದು ಹೇಳಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಜೀವಂತ ಸಾಕ್ಷಿಯಾಗಿ, ಸರಳ ಜೀವನ ನಡೆಸಿದ್ದ ಎಚ್.ಎಸ್.ದೊರೆಸ್ವಾಮಿ ಅವರ ಮಾದರಿ ಜೀವನವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸ ಆಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>