ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಂ.ಎಸ್ ಅವರು, ಬಸವಲಿಂಗಪ್ಪ ಅವರ ಸ್ಮಾರಕ ಸಭಾಂಗಣ, ಪುತ್ಥಳಿ, ವಸ್ತುಸಂಗ್ರಹಾಲಯ ನಿರ್ಮಾಣ, ವಿಸ್ತರಣೆ ಮತ್ತು ಸಂಶೋಧನಾ ಕಾರ್ಯಕ್ರಮಗಳು ಸೇರಿದಂತೆ ಕೌಶಲಾಧಾರಿತ ಸ್ವಯಂ ಉದ್ಯೋಗ ತರಬೇತಿ ನೀಡಲು ₹ 25 ಕೋಟಿ ಅನುದಾನ ನೀಡುವಂತೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.